alex Certify ಜಗತ್ತು ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ: ಇಸ್ರೋ ಸಾಧನೆಗೆ ಸಿಎಂ ಸಿದ್ಧರಾಮಯ್ಯ ಅಭಿನಂದನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಗತ್ತು ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ: ಇಸ್ರೋ ಸಾಧನೆಗೆ ಸಿಎಂ ಸಿದ್ಧರಾಮಯ್ಯ ಅಭಿನಂದನೆ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಚಂದ್ರಯಾನ-3 ವಿಕ್ರಮ್ ರೋವರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಸಂಜೆ 6.04 ಕ್ಕೆ ಇಳಿಯಿತು.

ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನದ ವಿಕ್ರಮ್ ಲ್ಯಾಂಡರ್ ಯಶಸ್ವಿ ಲ್ಯಾಂಡಿಂಗ್ ಸಾಧನೆ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿನಂದಿಸಿದ್ದಾರೆ.

ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲನೀಡಿದೆ. ಚಂದ್ರನ ದಕ್ಷಿಣ ದ್ರುವದಲ್ಲಿ ಚಂದ್ರಯಾನ-3 ರ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸಾಧನೆಯನ್ನು ಜಗತ್ತು ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ. ಇದು ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣ. ಇಂಥದ್ದೊಂದು ಅಸಾಧಾರಣ ಸಾಧನೆಗೈದ ನಾಡಿನ ವಿಜ್ಞಾನಿಗಳಿಗೆ ಅಭಿನಂದನೆಗಳು ಎಂದು ಸಿಎಂ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...