alex Certify ದೆಹಲಿಗೆ ಆಗಮಿಸಿದ ‘ಆಪರೇಷನ್ ಗಂಗಾ’ ಮತ್ತೊಂದು ವಿಮಾನ; 250 ಭಾರತೀಯರು ತಾಯ್ನಾಡಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೆಹಲಿಗೆ ಆಗಮಿಸಿದ ‘ಆಪರೇಷನ್ ಗಂಗಾ’ ಮತ್ತೊಂದು ವಿಮಾನ; 250 ಭಾರತೀಯರು ತಾಯ್ನಾಡಿಗೆ

ನವದೆಹಲಿ: ಉಕ್ರೇನ್ ನಲ್ಲಿರುವ ಭಾರತೀಯರ ರಕ್ಷಣಾ ಕಾರ್ಯಾಚರಣೆ ಬರದಿಂದ ಸಾಗಿದ್ದು, ಇದೀಗ ಮೂರನೇ ವಿಶೇಷ ವಿಮಾನ ಸುಮಾರು 250 ಭಾರತೀಯರನ್ನು ಹೊತ್ತು ದೆಹಲಿಗೆ ಬಂದಿಳಿದಿದೆ.

ಉಕ್ರೇನ್ ಮೇಲಿನ ರಷ್ಯಾ ಯುದ್ಧ ನಾಲ್ಕನೇ ದಿನ ಮುಂದುವರೆದಿದೆ. ಈ ನಡುವೆ ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದ್ದು, ಮೂರು ವಿಶೇಷ ವಿಮಾನಗಳ ಮೂಲಕ ‘ಆಪರೇಷನ್ ಗಂಗಾ’ ಹೆಸರಲ್ಲಿ ಏರ್ ಲಿಫ್ಟ್ ಮಾಡಲಾಗುತ್ತಿದೆ. ಈಗಾಗಲೇ ಎರಡು ವಿಮಾನಗಳು ಭಾರತಕ್ಕೆ ಆಗಮಿಸಿದೆ. ಇದೀಗ ಏರ್ ಇಂಡಿಯಾದ ಮೂರನೇ ವಿಮಾನ ದೆಹಲಿಗೆ ಆಗಮಿಸಿದೆ.

ಮಾರ್ಚ್ 4 ರಂದು ರಾಜ್ಯಾದ್ಯಂತ ಅನುದಾನಿತ ಶಾಲಾ, ಕಾಲೇಜು ಬಂದ್

ಉಕ್ರೇನ್ ನ ಬುಡಾಪೇಸ್ಟ್ ನಿಂದ ಸುಮಾರು 250 ಭಾರತೀಯರನ್ನು ಏರ್ ಲಿಫ್ಟ್ ಮಾಡಿರುವ ವಿಶೇಷ ವಿಮಾನ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಸುರಕ್ಷಿತವಾಗಿ ತಾಯ್ನಾಡಿಗೆ ಆಗಮಿಸಿದ ಭಾರತೀಯರನ್ನು ಕೇಂದ್ರ ಸರ್ಕಾರದ ಅಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...