ರೈಲಿನ ಮೇಲೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಬಾಲಕ ಸಾವು ಕಂಡ ಘಟನೆ ಜಾರ್ಖಂಡ್ ರಾಮಗಢ ಜಿಲ್ಲೆಯಲ್ಲಿ ನಡೆದಿದೆ.
ಸರಕು ರೈಲಿನ ಮೇಲೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ 16 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಓವರ್ ಹೆಡ್ ವಿದ್ಯುತ್ ತಂತಿಗಳ ಸ್ಪರ್ಶದಿಂದ ವಿದ್ಯುತ್ ಪ್ರವಹಿಸಿ ಬಾಲಕ ಸುಟ್ಟು ಕರಕಲಾಗಿದ್ದಾನೆ. ಚಿತಾಪುರ ನಿವಾಸಿಯಾಗಿರುವ ಬಾಲಕ ಸ್ನೇಹಿತರೊಂದಿಗೆ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ್ದಾನೆ. ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್ ರೈಲಿನ ಮೇಲೆ ಸೆಲ್ಫಿ ತೆಗೆದುಕೊಳ್ಳಲು ಈ ವೇಳೆ ವಿದ್ಯುತ್ ಸ್ಪರ್ಶಿಸಿ ಸುಟ್ಟು ಕರಕಲಾಗಿದ್ದಾನೆ ಎಂದು ಮುರಿ ಜಂಕ್ಷನ್ ಆರ್ಪಿಎಫ್ ಇನ್ಸ್ ಪೆಕ್ಟರ್ ಆರ್.ಕೆ. ತಿವಾರಿ ತಿಳಿಸಿದ್ದು, ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ಹೇಳಿದ್ದಾರೆ.