alex Certify ಭೀಕರ ಸರಣಿ ಅಪಘಾತ; ರಸ್ತೆ ದಾಟುತ್ತಿದ್ದ ಯುವತಿಯ ಮೇಲೆ ಹರಿದ ಕ್ಯಾಂಟರ್; ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ಸರಣಿ ಅಪಘಾತ; ರಸ್ತೆ ದಾಟುತ್ತಿದ್ದ ಯುವತಿಯ ಮೇಲೆ ಹರಿದ ಕ್ಯಾಂಟರ್; ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಕ್ಯಾಂಟರ್, ಕೆ.ಎಸ್.ಆರ್.ಟಿ.ಸಿ ಬಸ್, ಬೈಕ್ ಸರಣಿ ಅಪಘಾತದಲ್ಲಿ ರಸ್ತೆ ದಾಟುತ್ತಿದ್ದ ಯುವತಿ ಬಲಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಕೋರ್ಟ್ ಸರ್ಕಲ್ ಬಳಿ ನಡೆದಿದೆ.

ಬೆಂಗಳೂರಿನಿಂದ ಕೋಲಾರದ ಕಡೆಗೆ ಕ್ಯಾಂಟರ್ ವಾಹನ ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ಗೆ ಡಿಕ್ಕಿ ಹೊಡೆದಿದೆ. ಇದೇ ವೇಳೆ ತಾಯಿ ಜೊತೆ ರಸ್ತೆ ದಾಟುತ್ತಿದ್ದ ಯುವತಿಯ ಮೇಲೆ ಕ್ಯಾಂಟರ್ ಹರಿದಿದೆ. ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬನ್ನೇರುಘಟ್ಟ ನಿವಾಸಿ ಸುಧಾ (20) ಮೃತ ಯುವತಿ. ಅಪಘಾತದಲ್ಲಿ ಯುವತಿಯ ತಾಯಿ ಹಾಗೂ ಬೈಕ್ ಸವಾರ, ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಆಸ್ಪತೆಗೆ ದಾಖಲಿಸಲಾಗಿದೆ.

ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Kouzlo vody: Jak udělat z akvária skvělou dekoraci Чешский язык: Тест на IQ: найдите 3 стрелки за Co se stane, když kočku zataháte Originální recept