alex Certify ಪಡಿತರ ಚೀಟಿದಾರರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಳಿತದ ಭಾರಿ ಸುಧಾರಣೆಗೆ ಮುಂದಾಗಿದ್ದಾರೆ ಮನೆ ಬಾಗಿಲಿಗೆ ಸರ್ಕಾರದ ಸೇವೆಗಳನ್ನು ತಲುಪಿಸಲು ಕ್ರಮ ಕೈಗೊಂಡಿದ್ದಾರೆ. ಪಡಿತರ ಸೇರಿದಂತೆ ಸರ್ಕಾರದ 58 ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲಾಗುವುದು.

ಜನರ ಮನೆಬಾಗಿಲಿಗೆ ಸರ್ಕಾರಿ ಸೇವೆಗಳನ್ನು ಒದಗಿಸಲು ಜನಸೇವಕ, ಏಕೀಕೃತ ಸಾರ್ವಜನಿಕ ಕುಂದುಕೊರತೆ ನಿವಾರಣೆಗೆ ಜನಸ್ಪಂದನ ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಯೋಜನೆ ಆರಂಭವಾಗಲಿದ್ದು, ಜನವರಿ 26 ರಿಂದ ರಾಜ್ಯದ ಎಲ್ಲ ಗ್ರಾಮಗಳಿಗೆ ವಿಸ್ತರಣೆಯಾಗಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಪಡಿತರ ಚೀಟಿ, ಆಧಾರ್ ಕಾರ್ಡ್, ವಿವಿಧ ಪ್ರಮಾಣಪತ್ರ, ಪಿಂಚಣಿ ಸೇರಿದಂತೆ 8 ಇಲಾಖೆಗಳ 58 ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸಲು ಜನಸೇವಕ ಯೋಜನೆ (ಮಾಹಿತಿಗೆ www.janasevaka.karnataka.gov.in, 080 44554455) ರೂಪಿಸಲಾಗಿದೆ. ಸರ್ಕಾರಿ ಸೇವೆಗಳ ಬಗ್ಗೆ ದೂರು, ಕುಂದುಕೊರತೆ ಹೇಳಿಕೊಳ್ಳಲು ಜನಸ್ಪಂದನ(1092) ಯೋಜನೆ ತರಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...