alex Certify ರೈತರ ಭೂಮಿ ಸ್ವಾಧೀನದ ವೇಳೆ ನಾಲ್ಕು ಪಟ್ಟು ಪರಿಹಾರ: ತಿದ್ದುಪಡಿ ವಿಧೇಯಕ ಅಂಗೀಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರ ಭೂಮಿ ಸ್ವಾಧೀನದ ವೇಳೆ ನಾಲ್ಕು ಪಟ್ಟು ಪರಿಹಾರ: ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಕೆಐಎಎಡಿಬಿ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ರೈತರ ಭೂಮಿ ಸ್ವಾಧೀನದ ಸಂದರ್ಭದಲ್ಲಿ ಸರ್ಕಾರದ ಬೆಲೆಯ ನಾಲ್ಕು ಪಟ್ಟು ಪರಿಹಾರ ನೀಡಲು ಅವಕಾಶ ಮಾಡಿಕೊಡಲಾಗಿದೆ.

ಕರ್ನಾಟಕ ಕೆಐಎಎಡಿಬಿ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದ್ದು, ಇದರ ಅನ್ವಯ ಭೂಮಿ ಸ್ವಾಧೀನ ಸಂದರ್ಭದಲ್ಲಿ ರೈತರಿಗೆ ಸರ್ಕಾರದ ಬೆಲೆಯ ನಾಲ್ಕು ಪಟ್ಟು ಪರಿಹಾರ ನೀಡಬಹುದಾಗಿದೆ ಎಂದು ಹೇಳಲಾಗಿದೆ.

ಇನ್ನು ವಿಧಾನಸಭೆಯಲ್ಲಿ ಬಂಧೀಖಾನೆ ತಿದ್ದುಪಡಿ ವಿಧೇಯಕ ಕೂಡ ಅಂಗೀಕಾರವಾಗಿದೆ. ಜೈಲಿನೊಳಗೆ ಮೊಬೈಲ್ ಸೇರಿದಂತೆ ಎಲೆಕ್ಟ್ರಾನಿಕ್ ವಸ್ತುಗಳ ಮೇಲೆ ನಿರ್ಬಂಧ ಹೇರಲಾಗಿದೆ. ಪೆರೋಲ್ ಮೇಲೆ ಹೊರಗೆ ಹೋದವರು ನಿರ್ದಿಷ್ಟ ಸಮಯದೊಳಗೆ ವಾಪಸ್ ಆಗದಿದ್ದರೆ ಶಿಕ್ಷೆ ನೀಡಲಾಗುವುದು. ಅವರಿಗೆ ಜಾಮೀನು ನೀಡಿದವರಿಗೆ ಕೂಡ ಶಿಕ್ಷೆ ನೀಡುವ ವಿಧೇಯಕ ಇದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...