alex Certify ಶಾರೂಖ್‌ ಖಾನ್‌ ರನ್ನು ಜೀವಂತ ಸುಡಬೇಕೆಂದು ಗುಡುಗಿದ ಧಾರ್ಮಿಕ ಗುರುಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾರೂಖ್‌ ಖಾನ್‌ ರನ್ನು ಜೀವಂತ ಸುಡಬೇಕೆಂದು ಗುಡುಗಿದ ಧಾರ್ಮಿಕ ಗುರುಗಳು

ಪಠಾಣ್ ಚಿತ್ರದ ಬಗ್ಗೆ ಭಾರೀ ವಿರೋಧ ವ್ಯಕ್ತವಾಗ್ತಿದ್ದು, ನಟ ಶಾರುಖ್ ಖಾನ್ ಅವರನ್ನು ಜೀವಂತ ಸುಡಬೇಕೆಂದು ಅಯೋಧ್ಯೆಯ ಧಾರ್ಮಿಕ ಗುರುಗಳೊಬ್ಬರು ಗುಡುಗಿದ್ದಾರೆ.

ಶಾರುಖ್ ಖಾನ್ ಮುಂಬರುವ ಚಿತ್ರ ಪಠಾಣ್‌ನ ಬೇಷರಂ ರಂಗ್ ಹಾಡಿನ ವಿರುದ್ಧ ಈಗಾಗ್ಲೇ ಪ್ರತಿಭಟನೆ ವ್ಯಕ್ತವಾಗಿದ್ದು, ಚಿತ್ರ ಬಿಡುಗಡೆಯಾದರೆ ಥಿಯೇಟರ್‌ಗಳಿಗೆ ಬೆಂಕಿ ಹಚ್ಚುವುದಾಗಿ ಶ್ರೀಗಳು ಎಚ್ಚರಿಕೆ ನೀಡಿದ್ದಾರೆ.

ಅಯೋಧ್ಯೆಯ ತಪಸ್ವಿ ಚಾವ್ನಿಯ ಮಹಂತ್ ಪರಮಹಂಸ ಆಚಾರ್ಯ ಅವರು ಈ ರೀತಿ ಬೆದರಿಕೆ ಹಾಕಿದ್ದಾರೆ. ಇತ್ತೀಚಿಗೆ ಬಿಡುಗಡೆಯಾದ ಬೇಷರಂ ರಂಗ್ ಹಾಡಿನಲ್ಲಿ ನಟಿ ದೀಪಿಕಾ ಪಡುಕೋಣೆ ಧರಿಸಿರುವ ಕೇಸರಿ ಬಿಕಿನಿಯು ಹಿಂದೂ ಧರ್ಮವನ್ನು ಅವಮಾನಿಸಿದೆ ಎಂದು ಅವರು ಹೇಳಿದ್ದಾರೆ. ಚಿತ್ರದ ವಿರುದ್ಧ ಶ್ರೀಗಳು ಪ್ರತಿಭಟನೆ ನಡೆಸಿ ಅದರ ಪೋಸ್ಟರ್‌ಗಳನ್ನು ಸುಟ್ಟು ಹಾಕಿದರು.

“ನಮ್ಮ ಸನಾತನ ಧರ್ಮದ ಜನರು ಈ ಬಗ್ಗೆ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ನಾವು ಶಾರುಖ್ ಖಾನ್ ಅವರ ಪೋಸ್ಟರ್ ಅನ್ನು ಸುಟ್ಟು ಹಾಕಿದ್ದೇವೆ. ಪಠಾಣ್ ಬಿಡುಗಡೆ ಮಾಡುವ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುವುದಾಗಿ ತಪಸ್ವಿ ಚಾವ್ನಿಯ ಮಹಂತ್ ಪರಮಹಂಸ ಆಚಾರ್ಯ ಬೆದರಿಕೆ ಹಾಕಿದ್ದಾರೆ. ಚಿತ್ರವನ್ನು ಬಹಿಷ್ಕರಿಸುವಂತೆ ಜನತೆಗೆ ಅವರು ಮನವಿ ಮಾಡಿದರು.

ಪಠಾಣ್ ಜನವರಿ 25 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಆದರೆ ಬಿಡುಗಡೆಗೂ ಮುನ್ನವೇ #BoycottPathaan ಹಲವಾರು ದಿನಗಳಿಂದ Twitter ನಲ್ಲಿ ಟ್ರೆಂಡಿಂಗ್ ಆಗಿದ್ದು ಚಿತ್ರಕ್ಕೆ ಅಡ್ಡಿಯಾಗ್ತಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...