alex Certify ಬಜೆಟ್ ನಲ್ಲಿ ಉಪಯುಕ್ತ ಯೋಜನೆ: ವೀರೇಂದ್ರ ಹೆಗ್ಗಡೆ ಶ್ಲಾಘನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಜೆಟ್ ನಲ್ಲಿ ಉಪಯುಕ್ತ ಯೋಜನೆ: ವೀರೇಂದ್ರ ಹೆಗ್ಗಡೆ ಶ್ಲಾಘನೆ

ರಾಜ್ಯ ಬಜೆಟ್ ನಲ್ಲಿ ಜನರಿಗೆ ಉಪಯುಕ್ತ ಯೋಜನೆ ನೀಡಿರುವುದಕ್ಕೆ ಅಭಿನಂದನೆ ತಿಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಪತ್ರ ಬರೆದಿದ್ದಾರೆ.

ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ವೀರೇಂದ್ರ ಹೆಗಡೆ ಅವರು, ಧರ್ಮಸ್ಥಳಕ್ಕೆ ಬರುವ ಭಕ್ತರು ವಿಶೇಷವಾಗಿ ಮಹಿಳೆಯರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಅನೇಕ ಮಹಿಳೆಯರು ನಿಮ್ಮ ಹೆಸರಿನಲ್ಲಿ ಮಂಜುನಾಥ ಸ್ವಾಮಿಗೆ ಸೇವೆ ಮತ್ತು ಕಾಣಿಕೆ ಸಲ್ಲಿಸುತ್ತಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ 14ನೇ ಬಜೆಟ್ ಮಂಡಿಸಿದ ನಿಮಗೆ ಅಭಿನಂದನೆಗಳು. ಅನೇಕ ಯೋಜನೆಗಳ ಮೂಲಕ ಜನರಿಗೆ ಉಪಯುಕ್ತ ಕಾರ್ಯಕ್ರಮಗಳನ್ನು ನೀಡಿದ್ದೀರಿ. ಬಜೆಟ್ ನಲ್ಲಿ ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ ಪ್ರೋತ್ಸಾಹಿಸಿರುವ ವಿಚಾರ ತಿಳಿದು ಸಮಾಜಕ್ಕೆ ಸಂತೋಷವಾಗಿದೆ. ಎಲ್ಲರ ಪರವಾಗಿ ಅಭಿನಂದನೆಗಳು. ಮಂಜುನಾಥ ಸ್ವಾಮಿಯ ಅನುಗ್ರಹ ನಿಮ್ಮ ಮೇಲಿರಲಿ ಎಂದು ಪತ್ರದಲ್ಲಿ ವೀರೇಂದ್ರ ಹೆಗಡೆ ಹಾರೈಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...