alex Certify ಪುನೀತ್ ರಾಜಕುಮಾರ್ ಗೆ ‘ಭಾರತ ರತ್ನ’ ನೀಡಲು ಶರತ್ ಕುಮಾರ್ ಒತ್ತಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುನೀತ್ ರಾಜಕುಮಾರ್ ಗೆ ‘ಭಾರತ ರತ್ನ’ ನೀಡಲು ಶರತ್ ಕುಮಾರ್ ಒತ್ತಾಯ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ನೀಡಬೇಕು ಎಂದು ನಟ ಶರತ್ ಕುಮಾರ್ ಹೇಳಿದ್ದಾರೆ.

‘ಪುನೀತ ನಮನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ಸರ್ಕಾರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಿದೆ. ಇದಕ್ಕಾಗಿ ರಾಜ್ಯ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ. ಪುನೀತ್ ಅವರಿಗೆ ದೇಶದ ಅತ್ಯುನ್ನತ ಪ್ರಶಸ್ತಿಯಾದ ‘ಭಾರತ ರತ್ನ’ ನೀಡಬೇಕು ಎಂದು ಹೇಳಿದ್ದಾರೆ.

ಅಪ್ಪು ನಿಧನದ ಸುದ್ದಿ ಕೇಳಿ ದೇವರನ್ನು ಕ್ಷಮಿಸಲಾಗಲಿಲ್ಲ. ಪುನೀತ್ ರಾಜಕುಮಾರ್ ಸಮಾಜಕ್ಕೆ ಉತ್ತಮವಾದ ಸಂದೇಶ ನೀಡಿದ್ದಾರೆ. ಯಾರಿಗೂ ಗೊತ್ತಾಗದಂತೆ ಸಮಾಜ ಸೇವೆ ಮಾಡಿದ್ದಾರೆ. ನನ್ನ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಅಪ್ಪು ಬರುತ್ತಾರೆ ಎಂದುಕೊಂಡಿದ್ದೆ. ಆದರೆ, ನಾನೇ ಅವರ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಬರುವಂತಾಗಿದೆ ಎಂದು ಹೇಳಿದ ಶರತ್ ಕುಮಾರ್ ಭಾವುಕರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...