alex Certify ಗುಡ್ ನ್ಯೂಸ್: ಮುಜರಾಯಿ ಇಲಾಖೆ ಖಾಲಿ ಹುದ್ದೆಗಳಿಗೆ ನೇಮಕಾತಿ; ಅರ್ಚಕರಿಗೆ ವಿಮೆ, ವೇತನ ಸೌಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: ಮುಜರಾಯಿ ಇಲಾಖೆ ಖಾಲಿ ಹುದ್ದೆಗಳಿಗೆ ನೇಮಕಾತಿ; ಅರ್ಚಕರಿಗೆ ವಿಮೆ, ವೇತನ ಸೌಲಭ್ಯ

ಬೆಂಗಳೂರು: ಮುಜರಾಯಿ ಇಲಾಖೆಯಲ್ಲಿರುವ ಖಾಲಿ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ಹಜ್ ಹಾಗೂ ವಕ್ಫ್ ಖಾತೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಧಾರ್ಮಿಕ ಪರಿಷತ್ ಸಭೆ ನಡೆಸಿದ ಅವರು, ಮುಜರಾಯಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಿಎಂ ಜೊತೆಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

5 ವರ್ಷಕ್ಕಿಂತ ಹೆಚ್ಚು ಸಮಯ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುವ ಹಾಗೂ ಅವ್ಯವಹಾರ ನಡೆಯುತ್ತಿರುವ ಪ್ರಕರಣ ಕಂಡು ಬಂದಲ್ಲಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದ್ದಾರೆ.

ಅರ್ಚಕರಿಗೆ ವಿಮೆ ಸೌಲಭ್ಯ ಕಲ್ಪಿಸಬೇಕು ಎಂಬ ಬೇಡಿಕೆ ಇದ್ದು, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದು, ಇದರೊಂದಿಗೆ ಅರ್ಚಕರಿಗೆ ಆರನೇ ವೇತನ ಆಯೋಗದ ಶಿಫಾರಸಿನಂತೆ ವೇತನ ನೀಡುವ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...