ಶಿವಮೊಗ್ಗ : ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ದಿ: 21/01/2024 ರ ಭಾನುವಾರದಂದು 2023-24 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ನಗರದ “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುಪುರ, ವಿನೋಬನಗರ ಪೊಲೀಸ್ ಠಾಣೆ ಎದುರು, ಪೊಲೀಸ್ ಚೌಕಿ ಹತ್ತಿ, ಸವೋದಯ ಶಾಲೆ ಜಯನಗರ, ಮೋರ್ ಎದುರು ಸಿಟಿ ಬಸ್ ನಿಲ್ದಾಣ, 100 ಅಡಿರಸ್ತೆ, ಗೋಪಾಲಗೌಡ ಬಡಾವಣೆ, ಆಟೋ ನಿಲ್ದಾಣ ಪದ್ಮಾ ಟಾಕೀಸ್ ಹತ್ತಿರ” ಈ ಎಲ್ಲಾ ಕಡೆಗಳಲ್ಲಿ ವಿಶೇಷ ನೀರಿನ ಕಂದಾಯ ವಸೂಲಾತಿ ಕೌಂಟರ್ಗಳನ್ನು ತೆರೆಯಲಾಗಿದೆ.
ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸುವುದು ಅನಿವಾರ್ಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರುಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.