alex Certify BIG BREAKING: ಶಿವಸೇನೆ ನಾಯಕ ಸಂಜಯ್ ರಾವತ್ ರನ್ನು ವಶಕ್ಕೆ ಪಡೆದ ‘ಇಡಿ’ ಅಧಿಕಾರಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಶಿವಸೇನೆ ನಾಯಕ ಸಂಜಯ್ ರಾವತ್ ರನ್ನು ವಶಕ್ಕೆ ಪಡೆದ ‘ಇಡಿ’ ಅಧಿಕಾರಿಗಳು

ಭೂ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆಯಷ್ಟೇ ಶಿವಸೇನೆ ನಾಯಕ, ಸಂಸದ ಸಂಜಯ್ ರಾವತ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು, ಸತತ 9 ಗಂಟೆಗಳ ವಿಚಾರಣೆ ಬಳಿಕ ಅವರನ್ನು ತಮ್ಮ ವಶಕ್ಕೆ ಪಡೆದಿದ್ದಾರೆ.

ಬೆಳಿಗ್ಗೆ ಏಳು ಗಂಟೆಗೆ ಸಂಜಯ್ ರಾವತ್ ನಿವಾಸಕ್ಕೆ ಆಗಮಿಸಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದರು. ನಂತರ ಈ ಕುರಿತು ವಿವರಣೆ ಪಡೆದುಕೊಂಡಿದ್ದು ಈಗ ವಶಕ್ಕೆ ಪಡೆದಿದ್ದಾರೆ.

ಈ ಮೊದಲು ಜುಲೈ 27ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತಾದರೂ ಸಂಸತ್ ಅಧಿವೇಶನದ ಕಾರಣಕ್ಕೆ ಅವರು ಗೈರು ಹಾಜರಾಗಿದ್ದರು. ನಂತರ ಇಂದು ಬೆಳಿಗ್ಗೆ ಅವರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.

ದಾಳಿ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ್ದ ಸಂಜಯ್ ರಾವತ್, ಸುಳ್ಳು ಆರೋಪಗಳಿಗೆ ಅಂಜುವುದಿಲ್ಲ. ಯಾವುದೇ ಕಾರಣಕ್ಕೂ ಶಿವಸೇನೆಯನ್ನು ತೊರೆಯುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರ ಹಾಗೂ ಶಿವಸೇನೆ ಇವುಗಳೆಲ್ಲವನ್ನು ಎದುರಿಸುತ್ತದೆ ಎಂದು ಹೇಳಿದ್ದರು.

— ANI (@ANI) July 31, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...