alex Certify BIG NEWS: ಪತಿ ನಾಪತ್ತೆ; ಶಿವಸೇನೆ ಶಾಸಕನ ಪತ್ನಿಯಿಂದ ದೂರು ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪತಿ ನಾಪತ್ತೆ; ಶಿವಸೇನೆ ಶಾಸಕನ ಪತ್ನಿಯಿಂದ ದೂರು ದಾಖಲು

ಮುಂಬೈ: ಮಹಾರಾಷ್ಟ್ರ ಮೈತ್ರಿ ಸರ್ಕಾರದಲ್ಲಿ ಆಂತರಿಕ ಕಲಹ ಆರಂಭವಾಗಿದ್ದು, ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರಕ್ಕೆ ಪತನ ಭೀತಿ ಶುರುವಾಗಿದೆ. ಈ ನಡುವೆ ಶಿವಸೇನೆಯ ಶಾಸಕರ ಪತ್ನಿಯೊಬ್ಬರು ತನ್ನ ಪತಿ ನಾಪತ್ತೆಯಾಗಿದ್ದಾರೆ ಎಂದು ದೂರು ನೀಡಿದ್ದಾರೆ.

ಅಕೋಲಾದ ಅಲಾಪುರ್ ನ ಶಿವಸೇನೆ ಶಾಸಕ ನಿತಿನ್ ದೇಶಮುಖ್ ನಾಪತ್ತೆಯಾಗಿದ್ದಾರೆ ಎಂದು ಶಾಸಕರ ಪತ್ನಿ ಪ್ರಾಂಜಲಿ ದೇಶಮುಖ್ ದೂರು ನೀಡಿದ್ದಾರೆ. ವಿಧಾನಪರಿಷತ್ ಚುನಾವಣೆ ನಡೆದ ದಿನದಿಂದಲೂ ಪತಿ ಕಾಣೆಯಾಗಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಶಾಕಿಂಗ್‌……! ಶಿಶುವಿನ ತಲೆ ಕತ್ತರಿಸಿ ತಾಯಿ ಹೊಟ್ಟೆಯಲ್ಲೇ ಬಿಟ್ಟ ವೈದ್ಯಕೀಯ ಸಿಬ್ಬಂದಿ…..!!   

ಈ ನಡುವೆ ಸಚಿವ ಏಕನಾಥ್ ಶಿಂಧೆ ಸರ್ಕಾರದ ವಿರುದ್ಧ ಬಂಡಾಯ ಸಾರಿದ್ದು, 20ಕ್ಕೂ ಹೆಚ್ಚು ಶಾಸಕರೊಂದಿಗೆ ಗುಜರಾತ್ ನ ಸೂರತ್ ರೆಸಾರ್ಟ್ ಗೆ ತೆರಳಿದ್ದಾರೆ. ಶಿಂಧೆ ಜತೆ ತೆರಳಿದ್ದ ಮೂವರು ಶಾಸಕರು ಸಿಎಂ ಉದ್ಧವ್ ಠಾಕ್ರೆ ನಿವಾಸಕ್ಕೆ ವಾಪಸ್ ಆಗಿದ್ದಾರೆ ಎಂದು ತಿಳಿದುಬಂದಿದೆ. ಈ ಬೆಳವಣಿಗೆಗಳ ನಡುವೆಯೇ ಶಾಸಕ ನಿತಿನ್ ದೇಶಮುಖ್ ಪತ್ನಿ ತನ್ನ ಪತಿ ನಾಪತ್ತೆಯಾಗಿದ್ದಾರೆ ಎಂದು ದೂರು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...