alex Certify ಮಲೆನಾಡಿನ ಜನತೆಗೆ ಗುಡ್ ನ್ಯೂಸ್: ಆ. 11 ಶಿವಮೊಗ್ಗದಿಂದ ವಿಮಾನ ಹಾರಾಟ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಲೆನಾಡಿನ ಜನತೆಗೆ ಗುಡ್ ನ್ಯೂಸ್: ಆ. 11 ಶಿವಮೊಗ್ಗದಿಂದ ವಿಮಾನ ಹಾರಾಟ ಆರಂಭ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 27ರಂದು ಉದ್ಘಾಟಿಸಿದ್ದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆಗಸ್ಟ್ 11 ರಿಂದ ವಿಮಾನ ಹಾರಾಟ ಆರಂಭಿಸಲು ಇಂಡಿಗೋ ಸಂಸ್ಥೆ ಮುಂದಾಗಿದೆ.

ಪ್ರಧಾನಿ ಮೋದಿ ಸೇನಾ ವಿಮಾನದಲ್ಲಿ ಬಂದಿಳಿಯುವ ಮೂಲಕ ಶಿವಮೊಗ್ಗ ಸಮೀಪ ಸೋಗಾನೆಯಲ್ಲಿ ನಿರ್ಮಿಸಿರುವ ವಿಮಾನ ನಿಲ್ದಾಣ ಉದ್ಘಾಟಿಸಿದ್ದರು. ಆಗಸ್ಟ್ 11ರಿಂದ ವಿಮಾನ ಹಾರಾಟ ಆರಂಭಿಸಲು ಇಂಡಿಗೋ ಸಂಸ್ಥೆ ಮುಂದಾಗಿದ್ದು, ಇದಕ್ಕಾಗಿ ತಯಾರಿ ಮಾಡಿಕೊಳ್ಳಲಾಗಿದೆ.

ಸಂಸದ ಬಿ.ವೈ. ರಾಘವೇಂದ್ರ ಶೀಘ್ರವೇ ವಿಮಾನ ಹಾರಾಟಕ್ಕೆ ಮುಂದಾಗಬೇಕೆಂದು ಎಚ್ಚರಿಕೆ ನೀಡಿದ ಬೆನ್ನಲ್ಲೇ ಇಂಡಿಗೋ ವಿಮಾನಯಾನ ಸಂಸ್ಥೆ ಸಿದ್ಧತೆ ಕೈಗೊಂಡಿದೆ. ಆಗಸ್ಟ್ 11 ರಿಂದ ಶಿವಮೊಗ್ಗ -ಬೆಂಗಳೂರು ನಡುವೆ 78 ಸೀಟುಗಳ ಸಾಮರ್ಥ್ಯದ ವಿಮಾನ ಯಾನ ಶುರುವಾಗಲಿದೆ. ಬೆಳಗ್ಗೆ 9 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡುವ ವಿಮಾನ ಬೆಳಗ್ಗೆ 10.30 ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದೆ. ಮಧ್ಯಾಹ್ನ 12 ಗಂಟೆಗೆ ಶಿವಮೊಗ್ಗದಿಂದ ಹೊರಟು 1.30ಕ್ಕೆ ಬೆಂಗಳೂರು ತಲುಪಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...