alex Certify ಗಂಡನ ಎದುರಲ್ಲೇ ಮಹಿಳೆ ಥಳಿಸಿ ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದ ಇಬ್ಬರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಂಡನ ಎದುರಲ್ಲೇ ಮಹಿಳೆ ಥಳಿಸಿ ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದ ಇಬ್ಬರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆರಗ ಸಮೀಪ ಮಹಿಳೆಯನ್ನು ಥಳಿಸಿ ಬೆತ್ತಲೆಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಕ್ಷೇತ್ರ ತೀರ್ಥಹಳ್ಳಿ ತಾಲೂಕಿನ ಆರಗ ಸಮೀಪ ಸೋಮವಾರ ರಾತ್ರಿ ಗಂಡನೊಂದಿಗೆ ಮನೆಗೆ ತೆರಳುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಲಾಗಿದೆ.

ಹುಷಾರಿಲ್ಲದ ಕಾರಣ ಪತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದ ಮಹಿಳೆ ವಾಪಸ್ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸಂಪತ್, ಆದರ್ಶ್ ಹಾಗೂ ಇಬ್ಬರು ಯುವಕರು ಬೈಕ್ ನಲ್ಲಿ ಬಂದು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ.

ಪತಿಯನ್ನು ಥಳಿಸಿ ಮಹಿಳೆಯನ್ನು ಸಮೀಪದ ಕಾಡಿನೊಳಗೆ ಎಳೆದುಕೊಂಡು ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ವೇಳೆ ಮಹಿಳೆ ಹಾಗೂ ಆಕೆಯ ಪತಿ ಕೂಗಾಡಿದ್ದಾರೆ. ಕೂಗಾಟ ಕೇಳಿದ ಸ್ಥಳೀಯರು ಸ್ಥಳಕ್ಕೆ ಧಾವಿಸಿದಾಗ ಆರೋಪಿಗಳು ಪರಾರಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಆದರ್ಶ್ ಮತ್ತು ಸಂಪತ್ ಅವರನ್ನು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...