alex Certify BIG NEWS: ಮಾಜಿ ಸಚಿವರ ಮನೆ ಎದುರೇ ಸರಗಳ್ಳತನ; ವಿಳಾಸ ಕೇಳುವ ನೆಪದಲ್ಲಿ ಮಹಿಳೆಯರ ಸರ ಕದ್ದು ಪರಾರಿಯಾದ ಖದೀಮರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಸಚಿವರ ಮನೆ ಎದುರೇ ಸರಗಳ್ಳತನ; ವಿಳಾಸ ಕೇಳುವ ನೆಪದಲ್ಲಿ ಮಹಿಳೆಯರ ಸರ ಕದ್ದು ಪರಾರಿಯಾದ ಖದೀಮರು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಸರಗಳ್ಳ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮುಂಜಾನೆ ವಾಕಿಂಗ್ ಗೆ ತೆರಳಿದ್ದ ಮಹಿಳೆಯರನ್ನು ತಡೆದ ಬೈಕ್ ನಲ್ಲಿ ಬಂದ ಕಳ್ಳರು ಮಹಿಳೆ ಕತ್ತಿನಲ್ಲಿದ್ದ ಸರ ಕದ್ದು ಪರಾರಿಯಾಗಿರುವ ಘಟನೆ ಜಿಲ್ಲೆಯ ಮಲ್ಲೇಶ್ವರ ನಗರದಲ್ಲಿ ನಡೆದಿದೆ.

ಮುಂಜಾನೆ 5 ಗಂಟೆ ಸುಮಾರಿಗೆ ಇಬ್ಬರು ಮಹಿಳೆಯರು ವಾಕಿಂಗ್ ಗೆ ತೆರಳಿದ್ದರು. ಈ ವೇಳೆ ಬೈಕ್ ನಲ್ಲಿ ಬಂದ ಇಬ್ಬರು ವಿಳಾಸ ಕೇಳುವ ನೆಪದಲ್ಲಿ ಮಹಿಳೆಯರನ್ನು ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಬೈಕ್ ನಲ್ಲಿದ್ದ ಒಬ್ಬಾತ ತಕ್ಷಣ ಬೈಕ್ ನಿಂದ ಕೆಳಗಿಳಿದು ಓರ್ವ ಮಹಿಳೆಯ ಕೊರಳಲ್ಲಿದ್ದ ಬಂಗಾರದ ಸರ ಕಿತ್ತುಕೊಂಡಿದ್ದಾನೆ. ಕ್ಷಣಾರ್ಧದಲ್ಲಿ ಇಬ್ಬರೂ ಬೈಕ್ ನಲ್ಲಿ ಎಸ್ಕೇಪ್ ಆಗಿದ್ದಾರೆ.

ಸರಗಳ್ಳತನದ ಈ ದೃಶ್ಯ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮನೆಯ ಗೇಟ್ ಬಳಿಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಹಿಳೆಯ ಕೊರಳಲ್ಲಿದ್ದ 30 ಗ್ರಾಂ ಚಿನ್ನದ ಸರವನ್ನು ಕಳ್ಳರು ಎಗರಿಸಿದ್ದಾರೆ ಎನ್ನಲಾಗಿದೆ. ಕೋಟೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...