alex Certify ಶಿವಮೊಗ್ಗದಲ್ಲಿ ಕರ್ಫ್ಯೂ ಮುಕ್ತಾಯ: ಇಂದಿನಿಂದ ಶಾಲೆ-ಕಾಲೇಜುಗಳು ಪುನಾರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದಲ್ಲಿ ಕರ್ಫ್ಯೂ ಮುಕ್ತಾಯ: ಇಂದಿನಿಂದ ಶಾಲೆ-ಕಾಲೇಜುಗಳು ಪುನಾರಂಭ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಗಲಭೆ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಜಾರಿಗೊಳಿಸಲಾಗಿದ್ದ ಕರ್ಫ್ಯೂ ಸೋಮವಾರ ಬೆಳಗ್ಗೆ 6 ಗಂಟೆಗೆ ಅಂತ್ಯವಾಗಿದೆ.

ಸೋಮವಾರದಿಂದ ಶಾಲೆ-ಕಾಲೇಜುಗಳು ಪುನರಾರಂಭವಾಗಲಿದೆ. ಕರ್ಫ್ಯೂ ಹಿಂಪಡೆಯಲಾಗಿದ್ದು, ಮಾರ್ಚ್ 4 ರವರೆಗೆ ನಿಷೇಧಾಜ್ಞೆ ಮುಂದುವರೆಯಲಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಲಾಗಿದೆ. ತುರ್ತು ಸೇವೆಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಸೆಲ್ವಮಣಿ ತಿಳಿಸಿದ್ದಾರೆ.

ಶಿವಮೊಗ್ಗದ ಸೂಕ್ಷ್ಮ ಪ್ರದೇಶಗಳು, ಪ್ರಮುಖ ಸರ್ಕಲ್, ಗಲಭೆ ನಡೆದ ಸ್ಥಳಗಳು, ಮಂದಿರ, ಮಸೀದಿಗಳ ವ್ಯಾಪ್ತಿಯಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...