alex Certify ಅಂತ್ಯಸಂಸ್ಕಾರದ ವೇಳೆ ಅನುಮಾನ, ಸ್ಮಶಾನದಿಂದ ಆಸ್ಪತ್ರೆಗೆ ಮೃತದೇಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂತ್ಯಸಂಸ್ಕಾರದ ವೇಳೆ ಅನುಮಾನ, ಸ್ಮಶಾನದಿಂದ ಆಸ್ಪತ್ರೆಗೆ ಮೃತದೇಹ

ಶಿವಮೊಗ್ಗ: ಅಂತ್ಯಸಂಸ್ಕಾರ ನಡೆಯುವ ವೇಳೆಯಲ್ಲಿ ಸಾವಿನ ಕುರಿತಾಗಿ ಅನುಮಾನ ವ್ಯಕ್ತವಾಗಿದ್ದು, ಸ್ಮಶಾನದಿಂದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ ಸಮೀಪದ ಲಕ್ಕಿನಕೊಪ್ಪದ ಕಾಡಿನಲ್ಲಿ ಉರುಳಿಹಳ್ಳಿ ಮಾರುತಿ ಕ್ಯಾಂಪ್ ನಿವಾಸಿ ವಿಠಲ ಮತ್ತು ಆತನ ಸ್ನೇಹಿತ ಮದ್ಯಪಾನ ಮಾಡಿ ಮಲಗಿದ್ದಾರೆ. ಕೆಲ ಸಮಯದ ನಂತರ ಸ್ನೇಹಿತ ಎದ್ದು ಗ್ರಾಮಕ್ಕೆ ಹೋಗಿದ್ದಾನೆ. ಆದರೆ, ವಿಠಲ ಗ್ರಾಮಕ್ಕೆ ಮರಳಿರಲಿಲ್ಲ. ಕಾಡಿಗೆ ಹೋದ ಗ್ರಾಮಸ್ಥರೊಬ್ಬರು ವಿಠಲನ ಮೃತಪಟ್ಟಿರುವುದನ್ನು ಕಂಡು ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ಹೆಚ್ಚು ಮದ್ಯ ಸೇವಿಸಿದ್ದರಿಂದ ಮೃತಪಟ್ಟಿರಬಹುದು ಎಂಬ ಅನುಮಾನದಿಂದ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸ್ಮಶಾನದಲ್ಲಿ ವಿಠಲನ ಅಂತ್ಯಸಂಸ್ಕಾರ ನಡೆಯುವ ವೇಳೆಯಲ್ಲಿ ವಿಠಲನ ಸಾವಿನ ಬಗ್ಗೆ ಗ್ರಾಮಸ್ಥರೊಬ್ಬರು ಅನುಮಾನಗೊಂಡು ತುಂಗಾನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಮಶಾನಕ್ಕೆ ಆಗಮಿಸಿದ ಪೊಲೀಸರು ಅಂತ್ಯಸಂಸ್ಕಾರ ಮಾಡುವುದನ್ನು ತಡೆದು, ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಮೃತದೇಹ ರವಾನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...