alex Certify BREAKING NEWS: ಶಿವಮೊಗ್ಗ ಸಮೀಪ ವಿದ್ಯುತ್ ಪ್ರವಹಿಸಿ ಎರಡು ಆನೆಗಳು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಶಿವಮೊಗ್ಗ ಸಮೀಪ ವಿದ್ಯುತ್ ಪ್ರವಹಿಸಿ ಎರಡು ಆನೆಗಳು ಸಾವು

ಶಿವಮೊಗ್ಗ: ವಿದ್ಯುತ್ ತಂತಿ ತಗುಲಿ ಎರಡು ಆನೆಗಳು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಶೆಟ್ಟಿಹಳ್ಳಿ ಕಾಡಿನ ಆನೆಸರ ವನ್ಯಜೀವಿ ವಲಯದಲ್ಲಿ ನಡೆದಿದೆ.

ಜಮೀನುಗಳಿಗೆ ಕಾಡು ಪ್ರಾಣಿಗಳು ನುಗ್ಗದಂತೆ ಅಳವಡಿಸಲಾಗಿದ್ದ ತಂತಿ ಬೇಲಿಯ ವಿದ್ಯುತ್ ಪ್ರವಹಿಸಿ ಆನೆಗಳು ಮೃತಪಟ್ಟಿವೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೆಕ್ಕೆಜೋಳದ ಹೊಲದಲ್ಲಿ ಹಂದಿಗಳ ಹಾವಳಿ ತಪ್ಪಿಸಲು ಹೊಲದ ಸುತ್ತ ವಿದ್ಯುತ್ ತಂತಿ ಕಟ್ಟಲಾಗಿತ್ತು. ಆನೆಗಳು ಇದೇ ಮಾರ್ಗವಾಗಿ ಬಂದು ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿವೆ. ಚೆನ್ನಹಳ್ಳಿಯ ಚಂದ್ರಪ್ಪ ಎಂಬವರಿಗೆ ಸೇರಿದ ಹೊಲದಲ್ಲಿ ವಿದ್ಯುತ್ ಸ್ಪರ್ಶದಿಂದ 28 ವರ್ಷ ಮತ್ತು 20 ವರ್ಷದ ಆನೆಗಳು ಮೃತಪಟ್ಟಿವೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...