alex Certify BIG BREAKING: ಕೇಸರಿ ಬಾವುಟ ಹಾರಿಸಿದ್ದ ಧ್ವಜಸ್ತಂಭದಲ್ಲಿ ಹಾರಾಡಿದ ರಾಷ್ಟ್ರಧ್ವಜ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೇಸರಿ ಬಾವುಟ ಹಾರಿಸಿದ್ದ ಧ್ವಜಸ್ತಂಭದಲ್ಲಿ ಹಾರಾಡಿದ ರಾಷ್ಟ್ರಧ್ವಜ

ಶಿವಮೊಗ್ಗ: ಶಿವಮೊಗ್ಗದ ಸರ್ಕಾರಿ ಪದವಿ ಕಾಲೇಜ್ ಆವರಣದಲ್ಲಿ ರಾಷ್ಟ್ರಧ್ವಜ ಹಾರಿಸುವ ಸ್ಥಳದಲ್ಲಿ ಕೇಸರಿ ಬಾವುಟ ಹಾರಿಸಲಾಗಿತ್ತು. ಅದೇ ಸ್ತಂಭದಲ್ಲಿ ಎನ್.ಎಸ್.ಯು.ಐ. ಕಾರ್ಯಕರ್ತರು ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ.

ಸರ್ಕಾರಿ ಪದವಿ ಕಾಲೇಜಿನಲ್ಲಿ ಕೇಸರಿ ಬಾವುಟ ಹಾರಿಸಿದ್ದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಘಟನೆಯನ್ನು ಖಂಡಿಸಿದ ಎನ್.ಎಸ್.ಯು.ಐ.ನಿಂದ ರಾಷ್ಟ್ರಧ್ವಜಾರೋಹಣ ಮಾಡಲಾಗಿದೆ. ಈ ಮೂಲಕ ದೇಶದಲ್ಲಿ ಹಿಜಾಭ್, ಕೇಸರಿ ಶಾಲು ಮುಖ್ಯವಲ್ಲ, ತ್ರಿವರ್ಣಧ್ವಜದ ಶ್ರೇಷ್ಠ ಎಂಬುದನ್ನು ಸಾರಲಾಗಿದೆ.

ಶಿವಮೊಗ್ಗದ ಬಾಪೂಜಿನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ತಂಭದಲ್ಲಿ ಹಿಜಾಬ್, ಕೇಸರಿ ಶಾಲು ವಿಚಾರವಾಗಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ವಿದ್ಯಾರ್ಥಿಯೊಬ್ಬ ಧ್ವಜಸ್ತಂಭ ಹತ್ತಿ ಕೇಸರಿ ಧ್ವಜವನ್ನು ಕಟ್ಟಲು ಪ್ರಯತ್ನಿಸಿದ್ದು, ವಿವಾದಕ್ಕೆ ಕಾರಣವಾಗಿತ್ತು.

ರಾಜಕೀಯ ಹಿತಾಸಕ್ತಿಯಿಂದ ಕಾಣದ ಕೈಗಳ ಕುಮ್ಮಕ್ಕಿನಿಂದಾಗಿ‌ ಹಿಜಾಬ್, ಕೇಸರಿಶಾಲು ವಿವಾದ ಸೃಷ್ಟಿಸಿದ್ದು, ಇದನ್ನು ಎನ್.ಎಸ್.ಯು.ಐ. ತೀವ್ರವಾಗಿ ಖಂಡಿಸುತ್ತದೆ. ದೇಶದಲ್ಲಿ ಹಿಜಾಬ್ ಅಥವಾ ಕೇಸರಿ ಶಾಲು ಮುಖ್ಯವಲ್ಲ. ತ್ರಿವರ್ಣ ಧ್ವಜವೇ ಸರ್ವಶ್ರೇಷ್ಠ. ಆದ್ದರಿಂದ ಇಂದು ಶಿವಮೊಗ್ಗದಲ್ಲಿ ರಾಷ್ಟ್ರಧ್ವಜ ಹಾರಿಸುವ ಮೂಲಕ ವಿದ್ಯಾರ್ಥಿಗಳು ಹಿಜಾಬ್ ಕೇಸರಿ ಶಾಲು ವಿಚಾರ ಕೈಬಿಡಬೇಕು. ಹಿಂದಿನಂತೆ ತರಗತಿಗಳಲ್ಲಿ ಬ್ರಾತೃತ್ಬ ಭಾವನೆಯಿಂದ ಇರಬೇಕೆಂದು ಹಾಗೂ ವಿದ್ಯಾರ್ಥಿಗಳು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು NSUI ಕಾರ್ಯಕರ್ತರು ಧ್ವಜಾರೋಹಣ ನೆರವೇರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...