alex Certify ರೈತರಿಗೆ ಗುಡ್ ನ್ಯೂಸ್: ಮಳೆಯಿಂದ ಬೆಳೆ ನಷ್ಟವಾದಲ್ಲಿ ಮತ್ತೆ ಬೀಜ, ಗೊಬ್ಬರ ವಿತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್: ಮಳೆಯಿಂದ ಬೆಳೆ ನಷ್ಟವಾದಲ್ಲಿ ಮತ್ತೆ ಬೀಜ, ಗೊಬ್ಬರ ವಿತರಣೆ

ಮೈಸೂರು: ಮಳೆಯಿಂದ ಬೆಳೆ ನಷ್ಟವಾದ ರೈತರಿಗೆ ಮತ್ತೊಮ್ಮೆ ಬೀಜ, ರಸಗೊಬ್ಬರ ನೀಡಲಾಗುವುದು ಎಂದು ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಭಾರಿ ಮಳೆ, ನೆರೆಯಿಂದಾಗಿ ಬೆಳೆ ನಷ್ಟವಾಗಿದ್ದು, ನಷ್ಟದ ವರದಿ ಇನ್ನೂ ಕೇಂದ್ರದ ಕೈ ಸೇರಿಲ್ಲ. ವರದಿ ಬಂದ ಕೂಡಲೇ ಮತ್ತೊಮ್ಮೆ ಬಿತ್ತನೆ ಬೀಜ, ರಸಗೊಬ್ಬರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ,

ಪ್ರವಾಹ ಸಂಪೂರ್ಣ ತಗ್ಗಿದ ನಂತರ ಬೆಳೆ ನಷ್ಟದ ಸಮೀಕ್ಷೆ ನಡೆಸಲಾಗುತ್ತದೆ. ಪ್ರವಾಹದ ಸಂದರ್ಭದಲ್ಲಿ ಬೆಳೆ ನಷ್ಟದ ಅಂದಾಜು ಕಷ್ಟ. ಕೆಲವು ಜಿಲ್ಲೆಗಳಲ್ಲಿ ನೆರೆಹಾವಳಿಯಿಂದ ಬೆಳೆಗಳು ಕೊಚ್ಚಿ ಹೋಗಿದ್ದು, ಬೆಳೆ ನಷ್ಟವಾದ ರೈತರಿಗೆ ಮತ್ತೊಮ್ಮೆ ಬಿತ್ತನೆ ಬೀಜ, ರಸಗೊಬ್ಬರ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬೆಳೆ ನಷ್ಟದ ವರದಿ ಬಂದ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...