alex Certify Shocking: ಗೆಳತಿಗೆ ಸಂದೇಶ ಕಳುಹಿಸಿದ್ದಕ್ಕೆ ಯುವಕನಿಂದ ಸ್ನೇಹಿತನ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking: ಗೆಳತಿಗೆ ಸಂದೇಶ ಕಳುಹಿಸಿದ್ದಕ್ಕೆ ಯುವಕನಿಂದ ಸ್ನೇಹಿತನ ಹತ್ಯೆ

ಹಲವು ಬಾರಿ ಎಚ್ಚರಿಕೆ ನೀಡಿದರೂ ಸಹ ತನ್ನ ಗೆಳತಿಗೆ ವಾಟ್ಸಾಪ್ ಮೂಲಕ ಸಂದೇಶ ಕಳುಹಿಸಿದ್ದಲ್ಲದೆ ವಿವಿಧ ನಂಬರ್ ಗಳಿಂದ ಕರೆ ಮಾಡುತ್ತಿದ್ದ ಕಾರಣಕ್ಕೆ ಕೋಪಗೊಂಡ ಯುವಕನೊಬ್ಬ ಸ್ನೇಹಿತನನ್ನೇ ಕೊಲೆ ಮಾಡಿದ್ದಾನೆ. ಇಂಥದೊಂದು ಘಟನೆ ಆಂಧ್ರಪ್ರದೇಶದ ವಿಜಯನಗರಂ ನಲ್ಲಿ ನಡೆದಿದೆ.

ಪ್ರಕರಣದ ವಿವರ: ದೀಪಾವಳಿ ದಿನದಂದು ಪಟಾಕಿಯೊಂದಿಗೆ ಮನೆಯಿಂದ ಹೊರಗೆ ಹೋಗಿದ್ದ ನವೀನ್ ಎಂಬಾತ ವಾಪಸ್ ಬಂದಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಹುಡುಕಾಡಿದ ವೇಳೆ ಆತನ ಶವ ರೈಲು ಹಳಿಗಳ ಬಳಿ ಪತ್ತೆಯಾಗಿತ್ತು. ಆದರೆ ದೇಹದ ಮೇಲೆ ಗಾಯದ ಗುರುತಿದ್ದ ಕಾರಣ ಪೊಲೀಸರು ಇದು ಕೊಲೆ ಇರಬಹುದು ಎಂಬ ಶಂಕೆ ವ್ಯಕ್ತಪಡಿಸಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿದ್ದು, ಈ ವೇಳೆ ನವೀನ್ ಸ್ನೇಹಿತ ಬಾಲು ಎಂಬಾತನ ಮೇಲೆ ಅನುಮಾನ ಮೂಡಿದೆ. ಇದಕ್ಕೆ ಪುಷ್ಟಿ ನೀಡುವಂತೆ ಆತ, ಕೆಲವರ ಬಳಿ ರೈಲು ಡಿಕ್ಕಿ ಹೊಡೆದು ನವೀನ್ ಸಾವನ್ನಪ್ಪಿರುವುದಾಗಿ ಹೇಳಿದ್ದನಂತೆ. ಅಲ್ಲದೆ ಕೊಲೆಯಾದ ಮರುದಿನ ಆತ ನಾಪತ್ತೆಯಾಗಿದ್ದು ಸಹ ಪೊಲೀಸರ ಗಮನಕ್ಕೆ ಬಂದಿದೆ.

ಈ ಹಿನ್ನೆಲೆಯಲ್ಲಿ ಬಾಲುವನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ ವೇಳೆ, ಮರದ ದಿಮ್ಮಿಯಿಂದ ಹೊಡೆದು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಬಾಲುವಿನ ಗೆಳತಿಗೆ ನವೀನ್ ಪದೇಪದೇ ವಾಟ್ಸಾಪ್ ಸಂದೇಶ ಕಳುಹಿಸುತ್ತಿದ್ದ ಎನ್ನಲಾಗಿದ್ದು, ಈ ಕುರಿತು ಆತನಿಗೆ ಹಲವು ಬಾರಿ ಎಚ್ಚರಿಕೆ ನೀಡಿದ್ದ ಎನ್ನಲಾಗಿದೆ. ಇಷ್ಟಾದರೂ ಸಹ ನವೀನ್ ಮತ್ತೆ ಅದನ್ನೇ ಮುಂದುವರಿಸಿದ್ದು ಹೀಗಾಗಿ ತಾನು ಕೊಲೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...