alex Certify SHOCKING: ಜನಸಮೂಹದ ಮೇಲೆ ಹರಿದ ಶಾಸಕರ ಕಾರು; 22 ಮಂದಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಜನಸಮೂಹದ ಮೇಲೆ ಹರಿದ ಶಾಸಕರ ಕಾರು; 22 ಮಂದಿಗೆ ಗಾಯ

ಅಮಾನತುಗೊಂಡ ಬಿಜೆಡಿ ಶಾಸಕ ಪ್ರಶಾಂತ್​ ಜಗದೇವ್​​ಗೆ ಸೇರಿದ ಕಾರು ಹರಿದ ಪರಿಣಾಮ ಏಳು ಮಂದಿ ಪೊಲೀಸ್​ ಸಿಬ್ಬಂದಿ ಸೇರಿದಂತೆ ಕನಿಷ್ಟ 22 ಮಂದಿ ಗಾಯಗೊಂಡ ಘಟನೆಯು ಓಡಿಶಾದ ಖಾರ್ದಾ ಜಿಲ್ಲೆಯ ಬಾನಾಪುರದಲ್ಲಿ ನಡೆದಿದೆ.

ಬ್ಲಾಕ್​ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯುತ್ತಿದ್ದ ಸಂದರ್ಭದಲ್ಲಿ ಬಾಣಾಪುರ ಕಚೇರಿಯ ಹೊರಗೆ ಜಮಾಯಿಸಿದ್ದ ಜನರ ಗುಂಪಿನ ಮೇಲೆ ವಾಹನ ಹರಿದ ಪರಿಣಾಮ ಶಾಸಕರಿಗೂ ಸಹ ತೀವ್ರವಾಗಿ ಗಾಯವಾಗಿದೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಬಾಣಾಪುರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಆರ್ ಆರ್ ಸಾಹು ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಭುವನೇಶ್ವರದ ಏಮ್ಸ್‌ಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಮಾರು 15 ಬಿಜೆಪಿ ಕಾರ್ಯಕರ್ತರು ಮತ್ತು ಏಳು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

— Sumit Kumar Behera (@SumitOdisha) March 12, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...