SHOCKING: ಜನಸಮೂಹದ ಮೇಲೆ ಹರಿದ ಶಾಸಕರ ಕಾರು; 22 ಮಂದಿಗೆ ಗಾಯ 12-03-2022 4:14PM IST / No Comments / Posted In: Latest News, India, Live News ಅಮಾನತುಗೊಂಡ ಬಿಜೆಡಿ ಶಾಸಕ ಪ್ರಶಾಂತ್ ಜಗದೇವ್ಗೆ ಸೇರಿದ ಕಾರು ಹರಿದ ಪರಿಣಾಮ ಏಳು ಮಂದಿ ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಟ 22 ಮಂದಿ ಗಾಯಗೊಂಡ ಘಟನೆಯು ಓಡಿಶಾದ ಖಾರ್ದಾ ಜಿಲ್ಲೆಯ ಬಾನಾಪುರದಲ್ಲಿ ನಡೆದಿದೆ. ಬ್ಲಾಕ್ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯುತ್ತಿದ್ದ ಸಂದರ್ಭದಲ್ಲಿ ಬಾಣಾಪುರ ಕಚೇರಿಯ ಹೊರಗೆ ಜಮಾಯಿಸಿದ್ದ ಜನರ ಗುಂಪಿನ ಮೇಲೆ ವಾಹನ ಹರಿದ ಪರಿಣಾಮ ಶಾಸಕರಿಗೂ ಸಹ ತೀವ್ರವಾಗಿ ಗಾಯವಾಗಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಬಾಣಾಪುರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಆರ್ ಆರ್ ಸಾಹು ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಭುವನೇಶ್ವರದ ಏಮ್ಸ್ಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಮಾರು 15 ಬಿಜೆಪಿ ಕಾರ್ಯಕರ್ತರು ಮತ್ತು ಏಳು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. .@bjd_odisha Chilika MLA Prasant Jagdev brutally mows down public in Banpur. Women & Lady police officers injured. The arrogance of power of @Naveen_Odisha and his MLA's is clearly visible. #Odisha pic.twitter.com/OxSdP7Tr3v — Sumit Kumar Behera (@SumitOdisha) March 12, 2022