alex Certify Shocking: ಯುವಕನ ತಲೆ ಕತ್ತರಿಸಿ ಸೆಲ್ಫಿ ಕ್ಲಿಕ್ಕಿಸಿಕೊಂಡ ಹಂತಕರು…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking: ಯುವಕನ ತಲೆ ಕತ್ತರಿಸಿ ಸೆಲ್ಫಿ ಕ್ಲಿಕ್ಕಿಸಿಕೊಂಡ ಹಂತಕರು…!

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ನ ಖುಂಟಿ ಜಿಲ್ಲೆಯಲ್ಲಿ 20 ವರ್ಷದ ಬುಡಕಟ್ಟು ವ್ಯಕ್ತಿಯೊಬ್ಬನನ್ನ ಆತನ 24 ವರ್ಷದ ಸೋದರ ಸಂಬಂಧಿಯು ಶಿರಚ್ಛೇದ ಮಾಡಿರುವ ಭೀಕರ ಘಟನೆ ನಡೆದಿದೆ. ಘಟನೆ ಬಳಿಕ ಕೊಲೆ ಆರೋಪಿಯ ಗೆಳೆಯರು ಕತ್ತರಿಸಿದ ತಲೆಯೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಇತ್ತೀಚೆಗೆ ಮುರ್ಹು ಪ್ರದೇಶದಲ್ಲಿ ನಡೆದಿದೆ. ಮೃತನ ತಂದೆ ದಾಸಾಯಿ ಮುಂಡಾ ಅವರು ಡಿಸೆಂಬರ್ 2 ರಂದು ದಾಖಲಿಸಿದ ಎಫ್‌ಐಆರ್ ಆಧರಿಸಿ ಪ್ರಮುಖ ಆರೋಪಿ ಮತ್ತು ಆತನ ಪತ್ನಿ ಸೇರಿದಂತೆ ಆರು ಮಂದಿಯನ್ನು ಭಾನುವಾರ ಬಂಧಿಸಲಾಗಿದೆ.

ಎಫ್‌ಐಆರ್‌ನಲ್ಲಿ ಮೃತ ವ್ಯಕ್ತಿಯ ತಂದೆಯ ಹೇಳಿಕೆಯಂತೆ, ತಮ್ಮ ಮಗ ಕನು ಮುಂಡಾ ಡಿಸೆಂಬರ್ 1 ರಂದು ಮನೆಯಲ್ಲಿ ಒಬ್ಬನೇ ಇದ್ದ. ಇತರರು ಕೆಲಸಕ್ಕಾಗಿ ಗದ್ದೆಗಳಿಗೆ ಹೋಗಿದ್ದರು. ಸಂಜೆ ಮನೆಗೆ ಹಿಂದಿರುಗಿದಾಗ ಗ್ರಾಮಸ್ಥರು ದೂರುದಾರರಿಗೆ ತಮ್ಮ ಸೋದರಳಿಯ ಸಾಗರ್ ಮುಂಡಾ ಮತ್ತು ಅವರ ಸ್ನೇಹಿತರು ತಮ್ಮ ಮಗನನ್ನು ಅಪಹರಿಸಿದ್ದಾರೆ ಎಂದು ತಿಳಿಸಿದ್ದಾರೆ.

ತಮ್ಮ ಮಗನನ್ನು ಪತ್ತೆಹಚ್ಚಲು ವಿಫಲ ಪ್ರಯತ್ನಗಳ ನಂತರ ಅವರ ತಂದೆ ಮರುದಿನ ಎಫ್ಐಆರ್ ದಾಖಲಿಸಿದರು. ಆರೋಪಿಯನ್ನು ಬಂಧಿಸಲು ಕುಂತಿ ಉಪವಿಭಾಗದ ಪೊಲೀಸ್ ಅಧಿಕಾರಿ ಅಮಿತ್ ಕುಮಾರ್ ನೇತೃತ್ವದಲ್ಲಿ ಪೊಲೀಸ್ ತಂಡ ರಚಿಸಲಾಗಿತ್ತು.

ಆರೋಪಿಯ ಬಂಧನದ ನಂತರ ನಾಪತ್ತೆಯಾಗಿದ್ದ ವ್ಯಕ್ತಿಯ ದೇಹವು ಕುಮಾಂಗ್ ಗೋಪ್ಲಾ ಅರಣ್ಯದಲ್ಲಿ ಮತ್ತು ತಲೆ 15 ಕಿಮೀ ದೂರದ ದುಲ್ವಾ ತುಂಗ್ರಿ ಪ್ರದೇಶದಲ್ಲಿ ಪತ್ತೆಯಾಗಿತ್ತು.

ಆರೋಪಿಗಳು ಕತ್ತರಿಸಿದ ತಲೆಯೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಮೃತರ ಮೊಬೈಲ್ ಸೇರಿದಂತೆ ಐದು ಮೊಬೈಲ್ ಫೋನ್‌ಗಳು, ಎರಡು ರಕ್ತಸಿಕ್ತ ಹರಿತವಾದ ಆಯುಧಗಳು, ಕೊಡಲಿ ಮತ್ತು ಎಸ್‌ಯುವಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರ ಕುಟುಂಬಗಳು ಮತ್ತು ಆರೋಪಿಗಳ ನಡುವೆ ತುಂಡು ಭೂಮಿಗೆ ಸಂಬಂಧಿಸಿದಂತೆ ದೀರ್ಘಕಾಲದ ದ್ವೇಷವು ಶಿರಚ್ಛೇದಕ್ಕೆ ಕಾರಣ ಎಂದು ಹೇಳಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...