alex Certify SHOCKING : ಹಾಸನದಲ್ಲಿ 12 ವರ್ಷದ ಬಾಲಕನ ಬರ್ಬರ ಹತ್ಯೆ ; ರೈಲ್ವೇ ಟ್ರ್ಯಾಕ್ ಬಳಿ ಶವ ಎಸೆದು ಎಸ್ಕೇಪ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ಹಾಸನದಲ್ಲಿ 12 ವರ್ಷದ ಬಾಲಕನ ಬರ್ಬರ ಹತ್ಯೆ ; ರೈಲ್ವೇ ಟ್ರ್ಯಾಕ್ ಬಳಿ ಶವ ಎಸೆದು ಎಸ್ಕೇಪ್..!

ಹಾಸನ : 12 ವರ್ಷದ ಬಾಲಕನ ಬರ್ಬರವಾಗಿ ಹತ್ಯೆ ಮಾಡಿದ ದುಷ್ಕರ್ಮಿಗಳು ರೈಲ್ವೇ ಟ್ರ್ಯಾಕ್ ಬಳಿ ಶವ ಎಸೆದು ಎಸ್ಕೇಪ್ ಆದ ಘಟನೆ ಹಾಸನ ಹೊರವಲಯದ ಬಸವನಹಳ್ಳಿ ಬಳಿ ನಡೆದಿದೆ.

ರೈಲ್ವೇ ಹಳಿ ಬಳಿಯ ಪೊದೆಯಲ್ಲಿ ಕುಶಾಲ್ ಗೌಡ (12) ಮೃತದೇಹ ಪತ್ತೆಯಾಗಿದೆ. ಚಿಕ್ಕಹೊನ್ನೇನಹಳ್ಳಿಯ ವೆಂಕಟೇಶ್ ಹಾಗೂ ರೂಪಾ ದಂಪತಿಯ ಪುತ್ರ ಕುಶಾಲ್ ಮೃತಪಟ್ಟ ಬಾಲಕ.

ಮಕ್ಕಳ ಜೊತೆ ಆಟ ಆಡಲು ಹೋಗಿದ್ದ ಬಾಲಕ ಕಾಣೆಯಾಗಿದ್ದನು. ಚಿರತೆ ಹೊತ್ತೊಯ್ದಿರಬಹುದೆಂದು ಶಂಕಿಸಿ ಹುಡುಕಾಟ ನಡೆಸಲಾಗಿತ್ತು. ಆದರೆ ಎಲ್ಲೂ ಪತ್ತೆಯಾಗಿರಲಿಲ್ಲ. ಇಂದು ರೈಲ್ವೇ ಟ್ರ್ಯಾಕ್ ಬಳಿಯ ಪೊದೆಯೊಂದರಲ್ಲಿ ಕುಶಾಲ್ ಗೌಡ ಶವ ಪತ್ತೆಯಾಗಿದೆ. ಈ ಕುರಿತು ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...