alex Certify SHOCKING : ಆನೆ, ಹುಲಿ, ಚಿರತೆ ಆಯಿತು….ಈಗ ಕೋತಿ ದಾಳಿಗೆ ವ್ಯಕ್ತಿ ಬಲಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ಆನೆ, ಹುಲಿ, ಚಿರತೆ ಆಯಿತು….ಈಗ ಕೋತಿ ದಾಳಿಗೆ ವ್ಯಕ್ತಿ ಬಲಿ..!

ದಾವಣಗೆರೆ : ರಾಜ್ಯದಲ್ಲಿ ಮಾನವ-ವನ್ಯಜೀವಿಗಳ ಸಂಘರ್ಷ ಮುಂದುವರೆದಿದ್ದು, ರಾಜ್ಯದ ಹಲವು ಕಡೆ ಹುಲಿ, ಚಿರತೆ, ಕಾಡಾನೆ ದಾಳಿಗೆ ಮನುಷ್ಯರು ಬಲಿಯಾಗುವ ಘಟನೆಗಳು ಹೆಚ್ಚುತ್ತಿದೆ.

ಇದೀಗ ದಾವಣಗೆರೆಯಲ್ಲಿ ಕೋತಿ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ನಡೆದಿದೆ. ಅಚ್ಚರಿಯಾದರೂ ಇದು ಸತ್ಯ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ಈ ಘಟನೆ ನಡೆದಿದೆ.

ಮೂತ್ರ ವಿಸರ್ಜನೆಗೆಂದು ಗುತ್ಯಪ್ಪ ಅವರು ಮನೆಯಿಂದ ಹೊರ ಹೋಗಿದ್ದಾರೆ. ಈ ವೇಳೆ ಅವರ ಮನೆಯಲ್ಲಿದ್ದ ಕೋತಿಗಳು ಅವರ ಮೇಲೆ ದಾಳಿ ನಡೆಸಿದೆ. ಮುಖ ಮತ್ತು ಕೈಗಳಿಗೆ ಪರಚಿ ಗಾಯ ಮಾಡಿದೆ. ನಂತರ ಮನೆಯವರು ಕೂಡಲೇ ಹೊರಕ್ಕೆ ಬಂದು ಮಂಗಗಳನ್ನು ಓಡಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು. ಗಾಬರಿಯಿಂದ ಗುತ್ಯಪ್ಪ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...