alex Certify SHOCKING NEWS: ಆತಂಕ ಹೆಚ್ಚಿಸಿದ ಮೂವರು ಪುಟಾಣಿಗಳ ನಿಗೂಢ ಸಾವು; ಜಿಲ್ಲಾಸ್ಪತ್ರೆಗೆ ದಾಖಲಾದ ಮಕ್ಕಳು ಮೃತಪಡಲು ಕಾರಣವೇನು….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಆತಂಕ ಹೆಚ್ಚಿಸಿದ ಮೂವರು ಪುಟಾಣಿಗಳ ನಿಗೂಢ ಸಾವು; ಜಿಲ್ಲಾಸ್ಪತ್ರೆಗೆ ದಾಖಲಾದ ಮಕ್ಕಳು ಮೃತಪಡಲು ಕಾರಣವೇನು….?

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ, ಒಮಿಕ್ರಾನ್ ಭೀತಿ ಹೆಚ್ಚುತ್ತಿರುವ ನಡುವೆಯೇ ಮಕ್ಕಳಿಗೂ ಕೊರೊನಾ ಸೋಂಕು ಹರಡುತ್ತಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ನಡುವೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಮೂವರು ಮಕ್ಕಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

ಮೂರು ದಿನಗಳ ಹಿಂದೆ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ 1 ವರ್ಷದ 1 ತಿಂಗಳ ಮಗು ಪವಿತ್ರ ಹುಲಗುರ್, 1 ವರ್ಷದ 2 ತಿಂಗಳ ಮಗು ಉಮೇಶ್ ಕುರಗುಂದಿ ಹಾಗೂ ಒಂದುವರೆ ವರ್ಷದ ಮಗು ಚೇತನ ಪೂಜಾರಿ ಇದೀಗ ಏಕಾಏಕಿ ಸಾವನ್ನಪ್ಪಿದ್ದಾರೆ. ಮೂವರು ಪುಟ್ಟ ಮಕ್ಕಳ ಸಾವು ಆತಂಕಕ್ಕೆ ಕಾರಣವಾಗಿದೆ.

ಮರಣೋತ್ತರ ಪರೀಕ್ಷೆ ಬಳಿಕ ಮಕ್ಕಳ ಸಾವಿನ ಕಾರಣ ತಿಳಿಯಲಿದ್ದು, ತನಿಖೆ ಮುಂದುವರೆದಿದೆ ಎಂದು ಜಿಲ್ಲಾ ಟಿಹೆಚ್ ಒ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...