alex Certify SHOCKING NEWS: ಆತ್ಮಹತ್ಯೆಗೆ ಶರಣಾದ 8ನೇ ತರಗತಿ ವಿದ್ಯಾರ್ಥಿ; ಕಾರಣ ಗೊತ್ತೆ? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಆತ್ಮಹತ್ಯೆಗೆ ಶರಣಾದ 8ನೇ ತರಗತಿ ವಿದ್ಯಾರ್ಥಿ; ಕಾರಣ ಗೊತ್ತೆ?

ಬೆಂಗಳೂರು: ಕಾಪಿ ಹೊಡೆದು ಸಿಕ್ಕಿ ಬಿದ್ದ ವಿದ್ಯಾರ್ಥಿ ಅವಮಾನವಾಯಿತು ಎಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ವಿಜಯನಗರದಲ್ಲಿ ನಡೆದಿದೆ.

ಧೀರಜ್ (14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಧೀರಜ್ ರಾಜರಾಜೇಶ್ವರಿ ನಗರದಲ್ಲಿನ ಸ್ವರ್ಗರಾಣಿ ಸ್ಕೂಲ್ ಆಂಡ್ ಕಾಲೇಜಿನಲ್ಲಿ 8ನೇ ತರಗತಿ ಓದುತ್ತಿದ್ದ. ಪರೀಕ್ಷೆ ವೇಳೆ ಕಾಪಿ ಹೊಡೆದು ಸಿಕ್ಕಿಬಿದ್ದಿದ್ದ.

ಈ ಬಗ್ಗೆ ಶಿಕ್ಷಕರು ಧೀರಜ್ ಪೋಷಕರಿಗೆ ಮಾಹಿತಿ ನೀಡಿ ಶಾಲೆಗೆ ಕರೆಸಿದ್ದರು. ಅಲ್ಲದೇ ಪ್ರಾಂಶುಪಾಲರು ಧೀರಜ್ ನಿಂದ ಕ್ಷಮಾಪಣೆ ಪತ್ರ ಬರೆಸಿಕೊಂಡಿದ್ದರು. ಇದರಿಂದ ಬೇಸರಗೊಂಡ ವಿದ್ಯಾರ್ಥಿ ಮನೆಗೆ ಹೋದವನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...