alex Certify SHOCKING NEWS: ಉದ್ಯೋಗ ಸಿಗದೆ ಮನನೊಂದ MBA ಪದವೀಧರೆ; ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಉದ್ಯೋಗ ಸಿಗದೆ ಮನನೊಂದ MBA ಪದವೀಧರೆ; ಆತ್ಮಹತ್ಯೆಗೆ ಶರಣು

ಉಡುಪಿ: ಉದ್ಯೋಗ ಸಿಗದ ಹಿನ್ನೆಲೆಯಲ್ಲಿ ಮನನೊಂದ ಎಂಬಿಎ ಪದವಿಧರೆ ಯುವತಿ ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಡುಪಿಯ ಕಾಪುವಿನಲ್ಲಿ ಬೆಳಕಿಗೆ ಬಂದಿದೆ.

ಉಪ್ಪಿನಂಗಡಿಯ 23 ವರ್ಷದ ಸಹನಾ ಆತ್ಮಹತ್ಯೆಗೆ ಶರಣಾದ ಯುವತಿ. ಒಂದುವರೆ ವರ್ಷದ ಹಿಂದೆ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಎಂಬಿಎ ಮುಗಿಸಿದ್ದ ಸಹನಾ ತನ್ನ ವಿದ್ಯಾರ್ಹತೆಗೆ ತಕ್ಕ ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದರು. ಆದರೆ ಕೆಲಸ ಸಿಕ್ಕಿರಲಿಲ್ಲ. ಇದರಿಂದ ತುಂಬ ಬೇಸರಗೊಂಡಿದ್ದ ಸಹನಾ ಆತ್ಮಹತ್ಯೆಯ ದುಡುಕಿನ ನಿರ್ಧಾರ ಮಾಡಿದ್ದಾಳೆ.

ಶಿರ್ವ ಸಮಿಪದ ಕಟ್ಟಿಂಗೇರಿ ಗ್ರಾಮಕ್ಕೆ ಏ.30ರಂದು ತನ್ನ ಸಹೋದರಿ ಮನೆಗೆ ಬಂದಿದ್ದ ಸಹನಾ ಅಲ್ಲಿಯೇ ರಾತ್ರಿ ವಿಷ ಸೇವಿಸಿದ್ದಾಳೆ.

ವರ್ಷದಲ್ಲಿ ಒಂದು ದಿನ 12 ಗಂಟೆಗಳ ಕಾಲ ಮನೆ ತೊರೆಯುತ್ತಾರೆ ಈ ಗ್ರಾಮದ ಜನ….!

ಬೆಳಿಗ್ಗೆ ವಿಪರೀತ ವಾಂತಿ ಮಾಡಿಕೊಳ್ಳುತ್ತಿದ್ದ ಆಕೆಯನ್ನು ಉಡುಪಿ ನಗರದ ಮಿಷನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಂತಾಜನಕ ಸ್ಥಿತಿ ತಲುಪಿದ್ದ ಸಹನಾಳನ್ನು ಮೇ 7ರಂದು ಉಡುಪಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾಳೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...