alex Certify SHOCKING NEWS: ಎಸ್.ಎಸ್.ಎಲ್.ಸಿ ಫಲಿತಾಂಶದ ನಿರೀಕ್ಷೆಯಲ್ಲಿದ್ದ ಬಾಲಕ ದುರಂತ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಎಸ್.ಎಸ್.ಎಲ್.ಸಿ ಫಲಿತಾಂಶದ ನಿರೀಕ್ಷೆಯಲ್ಲಿದ್ದ ಬಾಲಕ ದುರಂತ ಸಾವು

ಬೆಂಗಳೂರು: ಭಾರಿ ಮಳೆಯ ಆರ್ಭಟಕ್ಕೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯವಸ್ಥಗೊಂಡಿದೆ. ನದಿ, ಕೆರೆ ಕೊಳ್ಳಗಳು ತುಂಬಿ ಹರಿಯುತ್ತಿವೆ. ಆದರೆ ಕೆಲ ಮಕ್ಕಳಿಗೆ ಮಳೆಯಲ್ಲಿ ಆಡುವ, ಕೆರೆಯಲ್ಲಿ ಈಜಾಡುವ ಹುಚ್ಚಾಟ. ಇಲ್ಲೊಬ್ಬ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾದಿದ್ದ ಬಾಲಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋಗಿ ಸಾವನ್ನಪ್ಪಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.

ಎಂ.ಎಸ್. ಪಾಳ್ಯದ ಸಯ್ಯದ್ ಆಕಿಬ್ (16) ಮೃತ ಬಾಲಕ. ಸಯ್ಯದ್ ತನ್ನ ಸ್ನೇಹಿತರ ಜತೆ ಈಜಲೆಂದು ಕೆರೆಗೆ ಹೋಗಿದ್ದಾನೆ. ಕೆರೆಯ ಆಳ ತಿಳಿಯದೇ ನೀರಿಗಿಳಿದಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಸಯ್ಯದ್ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿದ್ದು, ಪರೀಕ್ಷೆಯ ಫಲಿತಾಂಶ ಬರುವ ಮೊದಲೇ ದುರಂತಕ್ಕೀಡಾಗಿದ್ದು, ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಬಾಲಕನ ಮೃತದೇಹಕ್ಕಾಗಿ ಕೆರೆಯಲ್ಲಿ ಶೋಧ ನಡೆಸಲಾಗಿದೆ. ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...