alex Certify SHOCKING NEWS: ದಯಾಮರಣ ಕೋರಿ 60 BMTC ನೌಕರರಿಂದ ಅರ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ದಯಾಮರಣ ಕೋರಿ 60 BMTC ನೌಕರರಿಂದ ಅರ್ಜಿ

ಬೆಂಗಳೂರು: 60 ಬಿಎಂಟಿಸಿ ನೌಕರರು ತಮಗೆ ದಯಾಮರಣ ನೀಡುವಂತೆ ಕೋರಿ ಬಿಎಂಟಿಸಿ ಎಂ.ಡಿ. ಸತ್ಯವತಿ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಹಿಂದೆ ನಡೆದಿದ್ದ ಮುಷ್ಕರದ ವೇಳೆ ವಜಾಗೊಂಡಿದ್ದ ಸಾರಿಗೆ ನೌಕರರು ದಯಾಮರಣ ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ. ವಜಾಗೊಂಡಿದ್ದ ನೌಕರರಿಗೆ ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಲು ಕಠಿಣ ಷರತ್ತುಗಳನ್ನು ವಿಧಿಸಲಾಗಿದ್ದು, ಈ ಷರತ್ತುಗಳನ್ನು ಒಪ್ಪಿಕೊಂಡು ಕೆಲಸಕ್ಕೆ ಸೇರಲು ನಾವು ಸಿದ್ಧರಿಲ್ಲ ಎಂದು ನೌಕರರು ಅಳಲು ತೋಡಿಕೊಂಡಿದ್ದಾರೆ.

ಷರತ್ತುಗಳನ್ನು ಸಡಿಲಗೊಳಿಸಿ ಕೆಲಸಕ್ಕೆ ಸೇರಿಸಿಕೊಳ್ಳಬೇಕು. ಈ ಬಗ್ಗೆ ಈಗಾಗಲೇ ಹಲವು ಬಾರಿ ಮನವಿ ಮಾಡಲಾಗಿದ್ದರೂ ಗಮನಹರಿಸುತ್ತಿಲ್ಲ. ನಮಗೆ ಕೆಲಸ ಕೊಡಿ ಇಲ್ಲವೇ ದಯಾಮರಣ ಕೊಡಿ ಎಂದು ಅರ್ಜಿ ಸಲ್ಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...