alex Certify SHOCKING NEWS: ಪತಿಯ ಅನೈತಿಕ ಸಂಬಂಧಕ್ಕೆ ಬಲಿಯಾದ ನವವಿವಾಹಿತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಪತಿಯ ಅನೈತಿಕ ಸಂಬಂಧಕ್ಕೆ ಬಲಿಯಾದ ನವವಿವಾಹಿತೆ

ಚಿಕ್ಕಮಗಳೂರು: ಗಂಡನ ಅನೈತಿಕ ಸಂಬಂಧಕ್ಕೆ ಅಮಾಯಕ ಪತ್ನಿ ಬಲಿಯಾದ ಘಟನೆಯಿದು. ಮದುವೆಯಾದ ನಾಲ್ಕೇ ತಿಂಗಳಲ್ಲಿ ಪತಿಯ ಅನೈತಿಕ ಸಂಬಂಧಕ್ಕೆ ಆತನ ಪ್ರಿಯತಮೆಯಿಂದಲೇ ಪತ್ನಿ ಕೊಲೆಯಾಗಿದ್ದಾಳೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಗಣಿಬಸಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 20 ವರ್ಷದ ಭಾರತಿ ಕೊಲೆಯಾದ ಮಹಿಳೆ.

ಮಂಜುನಾಥ್ ಹಾಗೂ ಭಾರತಿ ನಾಲ್ಕು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಆದರೆ ಪತಿಯ ಅಕ್ರಮ ಸಂಬಂಧದ ಬಗ್ಗೆ ಗೊತ್ತಿರದ ಭಾರತಿ ಈಗ ಕೊಲೆಯಾಗಿ ಹೋಗಿದ್ದಾಳೆ. ಮಂಜುನಾಥ್ ವಿವಾಹವಾಗಿರುವುದು ಗೊತ್ತಾದ ಬೆನ್ನಲ್ಲೇ ಆತನ ಪ್ರಿಯತಮೆ ಕಾಂತಾ ಎಂಬುವವಳು, ಮಂಜುನಾಥ್ ಮನೆಗೆ ಬಂದು ಭಾರತಿಯನ್ನು ಮನೆಯ ಹಿಂಭಾಗದ ಹೊಲಕ್ಕೆ ಕರೆದೊಯ್ದು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾಳೆ ಎನ್ನಲಾಗಿದೆ.

ಕೃತ್ಯದ ಬಳಿಕ ಆರೋಪಿ ಕಾಂತಾ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾಳೆ. ವಿಚಾರಣೆ ವೇಳೆ ತನ್ನೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡು ಭಾರತಿಯನ್ನು ವಿವಾಹವಾಗಿದ್ದಕ್ಕೆ ಆಕೆಯನ್ನು ಹತ್ಯೆ ಮಾಡಿದ್ದಾಗಿ ಆರೋಪಿ ಬಾಯ್ಬಿಟ್ಟಿದ್ದಾಳೆ.

ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...