alex Certify SHOCKING NEWS: ಭೀಕರ ರಸ್ತೆ ಅಪಘಾತ; ನಟ ಸಂಚಾರಿ ವಿಜಯ್ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಭೀಕರ ರಸ್ತೆ ಅಪಘಾತ; ನಟ ಸಂಚಾರಿ ವಿಜಯ್ ಸ್ಥಿತಿ ಗಂಭೀರ

ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಭೀಕರ ರಸ್ತೆ ಅಪಘಾತಕ್ಕೀಡಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಕಾಲು ಮುರಿದಿದ್ದು, ಮೆದುಳಿನಲ್ಲಿ ರಕ್ತಸ್ರಾವವಾಗಿದೆ ಎಂದು ತಿಳಿದುಬಂದಿದೆ.

ನಾಯಕತ್ವ ಬದಲಾವಣೆ ಬಗ್ಗೆ ಪರಿಸ್ಥಿತಿ ಆಧರಿಸಿ ಹೈಕಮಾಂಡ್ ತೀರ್ಮಾನ, ಚರ್ಚೆ ಅಪ್ರಸ್ತುತ: ಶೆಟ್ಟರ್

ಸಂಚಾರಿ ವಿಜಯ್ ಅವರನ್ನು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೆದುಳಿನ ಬಲಭಾಗದಲ್ಲಿ ರಕ್ತಸ್ರಾವವಾಗಿದ್ದರಿಂದ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಅಲ್ಲದೇ ಅವರ ತೊಡೆಯ ಭಾಗದಲ್ಲಿ ಮೂಳೆ ಮುರಿದಿದ್ದು, ಆಪರೇಶನ್ ಮಾಡಲಾಗಿದೆ ಎಂದು ಆಸ್ಪತ್ರೆ ವೈದ್ಯ ಡಾ.ಅನಿಲ್ ಕುಮಾರ್ ತಿಳಿಸಿದ್ದಾರೆ.

ತಿಮಿಂಗಿಲದ ಬಾಯೊಳಗೆ ಹೋಗಿಯೂ ಬದುಕಿ ಬಂದ ʼಡೈವರ್‌ʼ

ಸ್ನೇಹಿತನೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಅಪಘಾತಕ್ಕೀಡಾಗಿದ್ದು, ನಿನ್ನೆ ರಾತ್ರಿಯೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಾದಾಗಲೇ ಅವರ ಸ್ಥಿತಿ ಗಂಭೀರವಾಗಿತ್ತು. ಸ್ಕ್ಯಾನಿಂಗ್ ಮಾಡಿದಾಗ ಮೆದುಳಿನಲ್ಲಿ ರಕ್ತಸ್ರಾವವಾಗಿರುವುದು ತಿಳಿದುಬಂದಿದ್ದು, ತಕ್ಷಣ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ ಐಸಿಯುನಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...