alex Certify SHOCKING NEWS: ಲಖಿಂಪುರ ಹಿಂಸಾಚಾರ ಪ್ರಕರಣ; ನಿಜಕ್ಕೂ ಅಂದು ನಡೆದಿದ್ದೇನು…? ಮತ್ತೊಂದು ಭಯಾನಕ ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಲಖಿಂಪುರ ಹಿಂಸಾಚಾರ ಪ್ರಕರಣ; ನಿಜಕ್ಕೂ ಅಂದು ನಡೆದಿದ್ದೇನು…? ಮತ್ತೊಂದು ಭಯಾನಕ ವಿಡಿಯೋ ವೈರಲ್

ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನಾನಿರತ ರೈತರ ಮೇಲೆ ಎರಡು ವಾಹನಗಳು ಹರಿದ ಭಯಂಕರ ದೃಶ್ಯದ ಅಸ್ಪಷ್ಟ ವಿಡಿಯೋ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದ ಬೆನ್ನಲ್ಲೇ ಇದೀಗ ಘಟನೆಯ ಬಗ್ಗೆ ಮತ್ತೊಂದು ವಿಡಿಯೋ ವೈರಲ್ ಆಗಿದೆ.

ಲಖಿಂಪುರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ರೈತರ ಮೇಲೆ ಹಿಂದಿನಿಂದ ಬಂದ ಎಸ್.ಯು.ವಿ. ಕಾರು ರೈತರಿಗೆ ಡಿಕ್ಕಿ ಹೊಡೆದಿದ್ದು, ಅವರ ಮೇಲೆಯೇ ಹರಿದಿದೆ. ಉದ್ದೇಶಪೂರ್ವಕವಾಗಿಯೇ ವೇಗವಾಗಿ ಬಂದ ಕಾರು ರೈತರ ಮೇಲೆ ಹರಿಸಿ ಕೊಲ್ಲಲಾಗಿದೆ ಎಂಬುದು ಈ ವಿಡಿಯೋದಲ್ಲಿ ಸ್ಪಷ್ಟವಾಗಿದೆ.

ಕ್ರಿಸ್ಮಸ್ ನಂದು ತೆರೆಮೇಲೆ ಬರಲಿದೆ ಡಾಲಿ ಧನಂಜಯ್ ನಟನೆಯ ‘ಬಡವ ರಾಸ್ಕಲ್’

ಒಂದರ ಹಿಂದೊಂದರಂತೆ ಬಂದ ವಾಹನಗಳು ರೈತರಿಗೆ ಡಿಕ್ಕಿ ಹೊಡೆದು ಸಾಗಿದೆ. ಇದರಿಂದ ರೊಚ್ಚಿಗೆದ್ದ ರೈತರು ದೊಣ್ಣೆ, ಕಲ್ಲುಗಳನ್ನು ಹಿಡಿದು ವಾಹನದತ್ತ ನುಗ್ಗಿದ್ದಾರೆ. ಇದರಿಂದಾಗಿ ನಾಲ್ವರು ರೈತರು ಸೇರಿ ಒಟ್ಟು 8 ಜನರು ಮೃತಪಟ್ಟಿದ್ದಾರೆ.

ರೈತರ ಮೇಲೆ ಕಾರು ಹರಿಸಿರುವ ಕುರಿತು ಸ್ಪಷ್ಟವಾಗಿ ಕಾಣುವ ವಿಡಿಯೋವನ್ನು ಇದೀಗ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಿದ್ದು, ಉದ್ದೇಶಪೂರ್ವಕವಾಗಿಯೇ ರೈತರ ಮೇಲೆ ವಾಹನ ಹರಿಸಲಾಗಿದೆ ಎಂದು ಹೇಳಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...