alex Certify SHOCKING NEWS: ಸಿಲಿಕಾನ್ ಸಿಟಿಯಲ್ಲಿ ಭಾರಿ ಶಬ್ಧ; ಭೂಕಂಪನದ ಅನುಭವ; ಬೆಚ್ಚಿಬಿದ್ದ ಜನರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಸಿಲಿಕಾನ್ ಸಿಟಿಯಲ್ಲಿ ಭಾರಿ ಶಬ್ಧ; ಭೂಕಂಪನದ ಅನುಭವ; ಬೆಚ್ಚಿಬಿದ್ದ ಜನರು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಶಬ್ಧವೊಂದು ಕೇಳಿಬಂದಿದ್ದು, ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಇದರಿಂದ ಜನರು ಆತಂಕಕ್ಕೀಡಾಗಿ ಮನೆಯಿಂದ ಹೊರಗೋಡಿ ಬಂದ ಘಟನೆ ನಡೆದಿದೆ.

ಬೆಂಗಳೂರಿನ ಆರ್.ಆರ್.ನಗರ, ಮಾಗಡಿ, ಹೆಮ್ಮಿಗೆಪುರ, ಕಗ್ಗಲಿಪುರ, ಕೆಂಗೇರಿ, ಬಿಡದಿ ಭಾಗಗಳಲ್ಲಿ ಹಲವೆಡೆ ಭೂಗರ್ಭದೊಳಗಿಂದ ಭಾರಿ ಶಬ್ಧ ಕೇಳಿಬಂದಿದ್ದು, ಕೆಲಕಾಲ ಭೂಮಿ ಕಂಪಿಸಿದೆ ಎಂದು ಹೇಳಲಾಗುತ್ತಿದೆ.

ಮಧ್ಯಾಹ್ನ 12.15ರ ಸುಮಾರಿಗೆ ಭಾರಿ ಶಬ್ಧದೊಂದಿಗೆ ಭೂಮಿ ಕಂಪಿಸಿದೆ. ಬೆಂಗಳೂರಿನ ಹಲವೆಡೆ ಹಾಗೂ ರಾಮನಗರದಲ್ಲಿ ಭೂಕಂಪನದ ಅನುಭವವಾಗಿದೆ. ಆದರೆ ರಿಕ್ಟರ್ ಮಾಪಕದಲ್ಲಿ ಯಾವುದೇ ಭೂ ಕಂಪನದ ತೀವ್ರತೆ ದಾಖಲಾಗಿಲ್ಲ ಎಂದು ಭೂವಿಜ್ಞಾನಿ ಹೆಚ್ ಎನ್ ಎಸ್ ಪ್ರಸಾದ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...