alex Certify ಹಲ್ಲಿ ಬಿದ್ದ ಆಹಾರ ಸೇವಿಸಿ ಹಲವರಿಗೆ ವಾಂತಿ, ಭೇದಿ: ಓರ್ವ ಅಸ್ವಸ್ಥ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಲ್ಲಿ ಬಿದ್ದ ಆಹಾರ ಸೇವಿಸಿ ಹಲವರಿಗೆ ವಾಂತಿ, ಭೇದಿ: ಓರ್ವ ಅಸ್ವಸ್ಥ

ಕಲಬರಗಿ: ಹಲ್ಲಿ ಬಿದ್ದ ಆಹಾರ ಸೇವಿಸಿ ಓರ್ವ ಅಸ್ವಸ್ಥರಾಗಿದ್ದು, ಹಲವರಿಗೆ ವಾಂತಿ ಭೇದಿ ಶುರುವಾಗಿದೆ. ಕಲಬುರಗಿ ಜಿಲ್ಲೆ ಸೇಡಂ ಪಟ್ಟಣದ ವಾಸವದತ್ತ ಸಿಮೆಂಟ್ ಫ್ಯಾಕ್ಟರಿಯಲ್ಲಿ ಘಟನೆ ನಡೆದಿದೆ.

ಕಾರ್ಮಿಕರ ಕ್ಯಾಂಟೀನ್ ಆಹಾರದಲ್ಲಿ ಹಲ್ಲಿ ಪತ್ತೆಯಾಗಿದೆ. ಕಾರ್ಮಿಕ ಶಿವಶರಣಯ್ಯ ಮುಧೋಳ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವು ಕಾರ್ಮಿಕರಿಗೆ ವಾಂತಿ ಭೇದಿ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಕಾರ್ಮಿಕರಿಗೆ ಗ್ಲುಕೋಸ್ ನೀಡಿ ಆಸ್ಪತ್ರೆ ಸಿಬ್ಬಂದಿ ಮನೆಗೆ ಕಳುಹಿಸಿದ್ದಾರೆ. ಮಧ್ಯಾಹ್ನ 150ಕ್ಕೂ ಅಧಿಕ ಜನ ಕ್ಯಾಂಟೀನ್ ನಲ್ಲಿ ಊಟ ಮಾಡಿದ್ದರು ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...