alex Certify ಯಡಿಯೂರಪ್ಪ ಬಿಟ್ರೆ ಬಿಜೆಪಿಗೆ ನಾಯಕತ್ವವೇ ಇಲ್ಲ: ಸಿದ್ಧರಾಮಯ್ಯ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಡಿಯೂರಪ್ಪ ಬಿಟ್ರೆ ಬಿಜೆಪಿಗೆ ನಾಯಕತ್ವವೇ ಇಲ್ಲ: ಸಿದ್ಧರಾಮಯ್ಯ ವಾಗ್ದಾಳಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ರಾಜಕೀಯ ವಿದೂಷಕ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ, ನನ್ನನ್ನು ಕಂಡರೆ ಅವರಿಗೆ ಭಯ. ಹಾಗಾಗಿ ನನ್ನನ್ನು ಟೀಕಿಸುತ್ತಾರೆ. ಮೋರ್ ಸ್ಟ್ರಾಂಗ್ ನೋರ್ ಎನಿಮಿಸ್, ಲೆಸ್ ಸ್ಟ್ರಾಂಗ್ ಲೆಸ್ ಎನಿಮಿಸ್, ನೋ ಸ್ಟ್ರಾಂಗ್ ನೋ ಎನಿಮಿಸ್ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ನಲ್ಲಿ ಸರಿ ಇಲ್ಲ ಎಂಬ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಬಿಜೆಪಿಯಲ್ಲಿ ಎಲ್ಲಾ ಸರಿ ಇದೆಯಾ ಎಂದು ಪ್ರಶ್ನಿಸಿದ್ದಾರೆ. ಪಿಎಸ್ಐ ಹಗರಣದಲ್ಲಿ ಯಡಿಯೂರಪ್ಪ ಮಗ ಪಾಲುದಾರ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದರು. ಯತ್ನಾಳ್ ಅವರ ಅವರ ಮೇಲೆ ಕ್ರಮ ತಗೊಂಡ್ರಾ ಎಂದು ಪ್ರಶ್ನಿಸಿದ್ದಾರೆ.

ಭಂಡರಿಗೆ ಏನು ಒತ್ತಡ ಹಾಕುವುದು ಎಂದು ಹೇಳಿದ ಅವರು, ಯಡಿಯೂರಪ್ಪ ಇಲ್ಲದೆ ಇವರಿಗೆ ಪ್ರಚಾರಕ್ಕೆ ಹೋಗಲು ಆಗುವುದಿಲ್ಲ. ಯಡಿಯೂರಪ್ಪನವರನ್ನು ಬಿಟ್ಟರೆ ಅವರಿಗೆ ಬೇರೆ ನಾಯಕತ್ವ ಇಲ್ಲ. ಬೊಮ್ಮಗೊಂಡನಹಳ್ಳಿಯಲ್ಲಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...