alex Certify ‘ಒಂದೇ ಪಕ್ಷದಲ್ಲಿ ದೇವೇಗೌಡ, ಸಿದ್ದರಾಮಯ್ಯ, ಯಡಿಯೂರಪ್ಪ; ಯಾರ ಕೈಯಲ್ಲೂ ಆಗದ್ದನ್ನು ಸಾಧಿಸೋದೇ ನನ್ನ ಕೆಲಸ’ – ಸಿಎಂ ಇಬ್ರಾಹಿಂ ಸ್ಫೋಟಕ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಒಂದೇ ಪಕ್ಷದಲ್ಲಿ ದೇವೇಗೌಡ, ಸಿದ್ದರಾಮಯ್ಯ, ಯಡಿಯೂರಪ್ಪ; ಯಾರ ಕೈಯಲ್ಲೂ ಆಗದ್ದನ್ನು ಸಾಧಿಸೋದೇ ನನ್ನ ಕೆಲಸ’ – ಸಿಎಂ ಇಬ್ರಾಹಿಂ ಸ್ಫೋಟಕ ಹೇಳಿಕೆ

ಸಿದ್ದರಾಮಯ್ಯ, ಯಡಿಯೂರಪ್ಪ, ದೇವೇಗೌಡರನ್ನು ಒಂದೇ ಪಕ್ಷದಲ್ಲಿ ಇರುವಂತೆ ಮಾಡುತ್ತೇನೆ ಎಂದು ವಿಧಾನ ಪರಿಷತ್​ ಸದಸ್ಯ ಸಿ.ಎಂ. ಇಬ್ರಾಹಿಂ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಯಾವುದು ಆಗಲ್ಲ ಎಂದು ಎಲ್ಲರೂ ಭಾವಿಸಿರುತ್ತಾರೋ ಅಂತಹ ಕೆಲಸವನ್ನು ಮಾಡಿ ತೋರಿಸುತ್ತೇನೆ ಎಂದು ಸವಾಲೆಸೆದಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ ಇನ್ಮುಂದೆ ಒಂದೇ ಪಕ್ಷದಲ್ಲಿ ಇರುತ್ತಾರೆ. ನನ್ನ ಈ ನಿಲುವಿನಿಂದ ಹಿಂದೆ ಸರಿಯುವ ಮಾತೇ ಇಲ್ಲ. ಕಲ್ಲನ್ನು ಮಾತನಾಡಿಸಿ ಅದರಿಂದ ನೀರು ತೆಗೆಯುವ ವ್ಯಕ್ತಿ ನಾನು ಎಂದು ಇಬ್ರಾಹಿಂ ಹೇಳಿದ್ದಾರೆ.

ದೇವೇಗೌಡರು ದೇಶದ ಪ್ರಧಾನಿಯಾಗ್ತಾರೆ ಎಂದು ಯಾರು ಊಹೆ ಕೂಡ ಮಾಡಿರಲಿಲ್ಲ. ಆದರೆ ನಾನು ಅದನ್ನು ಮಾಡಿ ತೋರಿಸಿದ್ದೇನೆ. ಡಿ.ಕೆ. ಶಿವಕುಮಾರ್​ರನ್ನು ಇದೇ ಪಕ್ಷಕ್ಕೆ ತರುತ್ತೇನೆ. ಈ ಬಗ್ಗೆ ಸಿದ್ದರಾಮಯ್ಯ ಬಳಿ ಈ ಹಿಂದೆಯೇ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...