alex Certify ಸಿದ್ಧರಾಮಯ್ಯ ಬಣಕ್ಕೆ ಮಹತ್ವದ ಸಂದೇಶ ರವಾನಿಸಿದ ಡಿ.ಕೆ. ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ಧರಾಮಯ್ಯ ಬಣಕ್ಕೆ ಮಹತ್ವದ ಸಂದೇಶ ರವಾನಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರ ಕಾಲಿಗೆ ಬಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಶೀರ್ವಾದ ಪಡೆದುಕೊಂಡಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ನಿನ್ನೆ ಹಮ್ಮಿಕೊಂಡಿದ್ದ ಜನಧ್ವನಿ ಕಾರ್ಯಕ್ರಮಕ್ಕೆ ಸಿದ್ಧರಾಮಯ್ಯ ಆಗಮಿಸಿದ್ದು, ಜಾಥಾಗೆ ಚಾಲನೆ ನೀಡುವ ಮೊದಲು ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ. ಸಿದ್ಧರಾಮಯ್ಯ ಅವರೂ ಡಿಕೆಶಿ ಭುಜದ ಮೇಲೆ ಕೈಯಿಟ್ಟು ಆತ್ಮೀಯತೆಯಿಂದ ಆಶೀರ್ವಾದ ಮಾಡಿದ್ದಾರೆ.

ಸಿದ್ಧರಾಮಯ್ಯನವರ ಆಶೀರ್ವಾದ ಪಡೆದು ಪಕ್ಷದ ಕಾರ್ಯಕರ್ತರಿಗೆ ಹೊಸ ಸಂದೇಶ ನೀಡಲಾಗಿದೆ. ಸಿದ್ದರಾಮಯ್ಯನವರ ಬಣಕ್ಕೂ ಈ ಮೂಲಕ ರಾಜಿ ಆಗಿರುವ ಸಂದೇಶ ರವಾನೆ ಮಾಡಲಾಗಿದೆ ಎನ್ನಲಾಗಿದೆ. ಮೈಸೂರು ಮೇಯರ್ ಆಯ್ಕೆ, ಮೈತ್ರಿ ವಿಚಾರದಲ್ಲಿ ಸಿದ್ಧರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ನಡುವೆ ಅಸಮಾಧಾನ ಉಂಟಾಗಿದ್ದು, ಸಿದ್ಧರಾಮಯ್ಯನವರ ನಿವಾಸಕ್ಕೆ ತೆರಳಿದ್ದ ಡಿ.ಕೆ. ಶಿವಕುಮಾರ್ ಚರ್ಚೆ ನಡೆಸಿದ್ದರು. ನಿನ್ನೆ ಸಿದ್ಧರಾಮಯ್ಯನವರ ಆಶೀರ್ವಾದ ಪಡೆದು ಕಾರ್ಯಕರ್ತರಿಗೆ, ಸಿದ್ಧರಾಮಯ್ಯ ಬಣಕ್ಕೆ ಸಂದೇಶ ರವಾನಿಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Jak se Jak teplota vody Proč semena papriky neklíčí a jak Vědci objevili nejzdravější sacharidy Vepřový jazyk: Tajemství přípravy lahodné lahůdky Odborník na výživu přináší