alex Certify ಜನಸಾಗರ ನೋಡಿ ಬಿಜೆಪಿಗೆ ಭಯ ಶುರುವಾಗಿದೆ ಎಂದ್ರು ಸಿದ್ಧರಾಮಯ್ಯ: ಮುಂದಿನ ಸಿಎಂ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನಸಾಗರ ನೋಡಿ ಬಿಜೆಪಿಗೆ ಭಯ ಶುರುವಾಗಿದೆ ಎಂದ್ರು ಸಿದ್ಧರಾಮಯ್ಯ: ಮುಂದಿನ ಸಿಎಂ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ…?

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಾವಣಗೆರೆಯಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮ ಮುಗಿದ ನಂತರ ಹರಿಹರ ತಾಲೂಕು ಬೆಳ್ಳೂಡಿಯಲ್ಲಿರುವ ಕಾಗಿನೆಲೆ ಕನಕ ಗುರು ಪೀಠದ ಶಾಖಾಮಠಕ್ಕೆ ಭೇಟಿ ನೀಡಿದ್ದಾರೆ.

ಬೆಳ್ಳೂಡಿಯಲ್ಲಿ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಆಶೀರ್ವಾದ ಪಡೆದುಕೊಂಡಿದ್ದಾರೆ. ನಂತರ ಮಾತನಾಡಿದ ಸಿದ್ದರಾಮಯ್ಯ, ನನ್ನ ಹುಟ್ಟುಹಬ್ಬಕ್ಕೆ ನಿರೀಕ್ಷೆಗೂ ಮೀರಿ ಜನ ಸೇರಿದ್ದರು. ಜನ ಸೇರಿದ್ದನ್ನು ನೋಡಿ ಬಿಜೆಪಿಯವರಿಗೆ ಭಯ ಶುರುವಾಗಿದೆ ಎಂದು ಹೇಳಿದ್ದಾರೆ.

ನಾವು 5 ಲಕ್ಷ ಜನರ ನಿರೀಕ್ಷೆಯಲ್ಲಿದ್ದೆವು. ಆದರೆ ಹೆಚ್ಚಿನ ಜನ ಸೇರಿದ್ದರು. ಕಾರ್ಯಕ್ರಮದ ಆಯೋಜಕರು ಹೆಚ್ಚು ವಾಹನ ವ್ಯವಸ್ಥೆ ಮಾಡಿರಲಿಲ್ಲ. ಜನ ಸ್ವಂತ ವಾಹನ, ಪಾದಯಾತ್ರೆಯ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರು, ಮುಂದೆ ಇಷ್ಟೊಂದು ಜನ ಸೇರುತ್ತಾರೋ ಇಲ್ಲವೋ ಗೊತ್ತಿಲ್ಲ. ಇಂದು ಸೇರಿದ್ದ ಜನ ನೋಡಿ ಬಿಜೆಪಿಯವರಿಗೆ ಭಯ ಶುರುವಾಗಿದೆ ಎಂದರು. ಮುಂದಿನ ಸಿಎಂ ಪ್ರಶ್ನೆಗೆ ಚುನಾವಣೆ ಮುಗಿಯಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...