alex Certify ರಾಜ್ಯ ರಾಜಕೀಯ ಇತಿಹಾಸದಲ್ಲಿಯೇ ಅತಿಹೆಚ್ಚು ಜನ ಸೇರಿದ ಕಾರ್ಯಕ್ರಮ ‘ಸಿದ್ದರಾಮಯ್ಯ ಅಮೃತ ಮಹೋತ್ಸ’ವಕ್ಕೆ ಬಂದವರೆಷ್ಟು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ರಾಜಕೀಯ ಇತಿಹಾಸದಲ್ಲಿಯೇ ಅತಿಹೆಚ್ಚು ಜನ ಸೇರಿದ ಕಾರ್ಯಕ್ರಮ ‘ಸಿದ್ದರಾಮಯ್ಯ ಅಮೃತ ಮಹೋತ್ಸ’ವಕ್ಕೆ ಬಂದವರೆಷ್ಟು ಗೊತ್ತಾ…?

ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ಜನ್ಮ ದಿನದ ಅಮೃತ ಮಹೋತ್ಸವಕ್ಕೆ 10 ಲಕ್ಷಕ್ಕೂ ಅಧಿಕ ಮಂದಿ ಆಗಮಿಸಿದ್ದರು ಎನ್ನಲಾಗಿದೆ. ಬಹುಶ: ದೇಶದಲ್ಲಿಯೇ ಯಾವ ನಾಯಕನ ಹುಟ್ಟುಹಬ್ಬ ಇಷ್ಟೊಂದು ಅದ್ದೂರಿಯಾಗಿ ಆಚರಿಸಿರಲಿಲ್ಲ ಎಂದು ಹೇಳಲಾಗಿದೆ.

ರಾಜ್ಯದ ಮೂಲೆ ಮೂಲೆಗಳಿಂದಲೂ ದಾವಣಗೆರೆಗೆ ಜನಸಾಗರ ಹರಿದು ಬಂದಿತ್ತು. ಕಿಲೋಮೀಟರುಗಟ್ಟಲೇ ಜನ ಸೇರಿದ್ದು, ಈ ಮೂಲಕ ರಾಜ್ಯದ ರಾಜಕೀಯ ಇತಿಹಾಸದಲ್ಲಿಯೇ ಅತಿ ಹೆಚ್ಚು ಜನರು ಸೇರಿದ ಕಾರ್ಯಕ್ರಮ ಇದಾಗಿದೆ ಎನ್ನುವ ಹೆಗ್ಗಳಿಕೆಗೆ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಾಕ್ಷಿಯಾಗಿದೆ.

ಸುಮಾರು 5 ಲಕ್ಷಕ್ಕೂ ಅಧಿಕ ಜನ ಭಾಗವಹಿಸಬಹುದೆಂಬ ನಿರೀಕ್ಷೆ ಆಯೋಜಕರಲ್ಲಿತ್ತು, ಆದರೆ, 10 ಲಕ್ಷಕ್ಕೂ ಅಧಿಕ ಜನ ಕಾರ್ಯಕ್ರಮಕ್ಕೆ ಸಾವಿರಾರು ವಾಹನಗಳಲ್ಲಿ, ಪಾದಯಾತ್ರೆ ಮೂಲಕ ಆಗಮಿಸಿದ್ದರು. ಬೆಳಗ್ಗೆಯಿಂದ ಸಂಜೆಯವರೆಗೂ ನಿರಂತರವಾಗಿ ಊಟದ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 7 ಲಕ್ಷಕ್ಕೂ ಅಧಿಕ ಜನ ಊಟ ಮಾಡಿದ್ದಾರೆ. ಅಡುಗೆಗಾಗಿ 5 ಕೋಟಿ ರೂ. ವೆಚ್ಚ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...