alex Certify ಕುತೂಹಲಕ್ಕೆ ಕಾರಣವಾದ ಸಿದ್ಧರಾಮಯ್ಯ ಕಾರ್ಯಕ್ರಮ: ಕ್ಷೇತ್ರ ಬದಲಿಸ್ತಾರಾ ಮಾಜಿ ಸಿಎಂ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುತೂಹಲಕ್ಕೆ ಕಾರಣವಾದ ಸಿದ್ಧರಾಮಯ್ಯ ಕಾರ್ಯಕ್ರಮ: ಕ್ಷೇತ್ರ ಬದಲಿಸ್ತಾರಾ ಮಾಜಿ ಸಿಎಂ..?

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಇಂದು ಎರಡನೇ ದಿನದ ಪ್ರವಾಸ ಕೈಗೊಂಡಿದ್ದಾರೆ. ವರುಣಾ ಕ್ಷೇತ್ರದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.

ಈ ಕ್ಷೇತ್ರವನ್ನು ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಪ್ರತಿನಿಧಿಸುತ್ತಿದ್ದಾರೆ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪಾದಯಾತ್ರೆಗೆ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10.30 ಕ್ಕೆ ತಗಡೂರು ಗ್ರಾಮದಲ್ಲಿ ಕಾರ್ಯಕ್ರಮ ನಡೆಯಲಿದೆ. ತಂದೆ ಬಂದರೆ ಕ್ಷೇತ್ರ ಬಿಟ್ಟು ಕೊಡುತ್ತೇನೆ ಎಂದು ಯತಿಂದ್ರ ಹೇಳಿದ್ದರು. ಸಿದ್ದರಾಮಯ್ಯ ಇಂದಿನ ಕಾರ್ಯಕ್ರಮ ಕುತೂಹಲಕ್ಕೆ ಕಾರಣವಾಗಿದೆ.

ಸಿದ್ಧರಾಮಯ್ಯ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರ ಬದಲಿಸಲಿದ್ದಾರೆ ಎನ್ನಲಾಗಿದ್ದು, ಮತ್ತೆ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆಯೇ ಎಂದೆಲ್ಲಾ ಚರ್ಚೆಯಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...