alex Certify ‘ಲವ್ ಜಿಹಾದ್’, ಮತಾಂತರ ಕಾಯ್ದೆ ಸಂವಿಧಾನ ವಿರೋಧಿಯಾಗುತ್ತೆ: ತೀರ್ಮಾನ ಅವರಿಗೇ ಬಿಟ್ಟ ವಿಚಾರ -ಸಿದ್ಧರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಲವ್ ಜಿಹಾದ್’, ಮತಾಂತರ ಕಾಯ್ದೆ ಸಂವಿಧಾನ ವಿರೋಧಿಯಾಗುತ್ತೆ: ತೀರ್ಮಾನ ಅವರಿಗೇ ಬಿಟ್ಟ ವಿಚಾರ -ಸಿದ್ಧರಾಮಯ್ಯ

ಶಿವಮೊಗ್ಗ: ಶಿರಾ ಮತ್ತು ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜಯ ನಿಶ್ಚಿತ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸಮೀಕ್ಷೆಗಳು ಏನೇ ಇರಲಿ, ಜನ ಕಾಂಗ್ರೆಸ್ ಪರವಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮೀಕ್ಷೆಯ ಪ್ರಕಾರ, ಶಿರಾ ಮತ್ತು ಆರ್.ಆರ್. ನಗರದಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ. ಆದರೆ, ನಾನು ಎರಡೂ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದು ಯಾವ ಆಧಾರದಲ್ಲಿ ಸಮೀಕ್ಷೆ ನಡೆಸಿದ್ದಾರೆ ಎನ್ನುವುದು ಗೊತ್ತಿಲ್ಲ. ಬಿಜೆಪಿಯವರು ಹಣ ನೀಡಿ ಪ್ರಚಾರ ನಡೆಸಿದ್ದಾರೆ ಎಂದು ದೂರಿದ್ದಾರೆ.

ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಬಂಧನ ರಾಜಕೀಯ ಪ್ರೇರಿತ ಎಂದು ಆರೋಪಿಸಿದ ಅವರು, ಲವ್ ಜಿಹಾದ್, ಮತಾಂತರದ ಕುರಿತಾಗಿ ಕಾಯ್ದೆ ಜಾರಿಗೊಳಿಸುವುದು ಸಂವಿಧಾನ ವಿರೋಧಿಯಾಗುತ್ತದೆ. ನಾನು ಯಾವ ಧರ್ಮದಲ್ಲಿ ಇರಬೇಕು ಎನ್ನುವುದನ್ನು ತೀರ್ಮಾನಿಸುವುದು ಅವರವರಿಗೆ ಬಿಟ್ಟ ವಿಚಾರವಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...