alex Certify BIG NEWS: ಗೃಹ ಇಲಾಖೆಗೆ ಡಿಸಿಎಂ ಪತ್ರ ವಿಚಾರ; ಸಿಎಂ ಸಿದ್ದರಾಮಯ್ಯ ಹೇಳಿದ್ದೇನು? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗೃಹ ಇಲಾಖೆಗೆ ಡಿಸಿಎಂ ಪತ್ರ ವಿಚಾರ; ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಬೆಳಗಾವಿ: ಕೋಮುಗಲಭೆ ಪ್ರಕರಣ ಕೈಬಿಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಪ್ರಕರಣ ಹಿಂಪಡೆಯುವ ಯಾವ ಪ್ರಸ್ತಾಪವೂ ಇಲ್ಲ ಎಂದು ಹೇಳಿದ್ದಾರೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆಯುವ ವಿಚಾರವಾಗಿ ಗೃಹ ಇಲಾಖೆಗೆ ಪತ್ರ ಬರೆದಿರುವ ಬಗ್ಗೆ ಪ್ರಕರಣಗಳನ್ನು ಹಿಂಪಡೆಯುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಹೇಳಿದ್ದಾರೆ.

ವಕೀಲರು ಹಾಗೂ ಹೋರಾಟಗಾರರು ಒಂದು ಪತ್ರ ಬರೆದಿದ್ದಾರೆ. ಅದರ ಮೇಲೆ ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ರ ಬರೆದಿದ್ದಾರೆ. ಆ ಪತ್ರವನ್ನು ನಾನು ಇಂದೇ ನೋಡಿದ್ದು. ಯಾವುದೇ ಕೇಸ್ ಹಿಂಪಡೆಯುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...