alex Certify ‘ಲಖೀಂಪುರ ಖೇರಿ ಹಿಂಸಾಚಾರ ಉದ್ದೇಶಪೂರ್ವಕ ಕೃತ್ಯ’ – ಎಸ್​ಐಟಿ ವರದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಲಖೀಂಪುರ ಖೇರಿ ಹಿಂಸಾಚಾರ ಉದ್ದೇಶಪೂರ್ವಕ ಕೃತ್ಯ’ – ಎಸ್​ಐಟಿ ವರದಿ

ಸುಮಾರು ಮೂರು ತಿಂಗಳ ಹಿಂದೆಯಷ್ಟೇ ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ನಡೆದ ರೈತರ ಮೇಲಿನ ಹಿಂಸಾಚಾರವು ಪೂರ್ವನಿಯೋಜಿತ ಪಿತೂರಿ ಎಂದು ವಿಶೇಷ ತನಿಖಾ ತಂಡವು ಹೇಳಿದೆ. ಈ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್​ ಮಿಶ್ರಾ ಅವರ ಪುತ್ರ ಆಶಿಶ್​ ಮಿಶ್ರಾ ಪ್ರಮುಖ ಆರೋಪಿಯಾಗಿದ್ದಾರೆ.

ಆಶಿಶ್​ ಸೇರಿದಂತೆ 13 ಮಂದಿ ಆರೋಪಿಗಳ ವಿರುದ್ಧ ಎಸ್​ಐಟಿ ಕೊಲೆ ಯತ್ನದ ಆರೋಪ ಹೊರಡಿಸಿದೆ. ಅಪಾಯಕಾರಿ ಶಸ್ತ್ರಾಸ್ತ್ರಗಳು ಹಾಗೂ ಅನೇಕ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯದಿಂದಾಗಿ ಅನೇಕರಿಗೆ ಗಂಭೀರ ಗಾಯ ಉಂಟಾಗಿದೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಎಸ್​​ಐಟಿ ವರದಿಯನ್ನು ಟ್ವಿಟರ್​ನಲ್ಲಿ ಪತ್ರಕರ್ತರು ಶೇರ್​ ಮಾಡಿದ್ದಾರೆ. ಈ ಪತ್ರದಲ್ಲಿ ಎಸ್​ಐಟಿ ತನಿಖಾಧಿಕಾರಿ ವಿದ್ಯಾರಾಮ್​​ ದಿವಾಕರ್​, ಈ ಘಟನೆಯು ಉದ್ದೇಶಪೂರ್ವಕವಾಗಿದೆ ಇದು ಯಾವುದೇ ನಿರ್ಲಕ್ಷ್ಯದಿಂದ ಸಂಭವಿಸಿದ್ದಲ್ಲ ಎಂದು ಬರೆದಿರೋದನ್ನು ಕಾಣಬಹುದಾಗಿದೆ.

ಆರೋಪಿಗಳ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯನ್ನು ಬಳಕೆ ಮಾಡುವಂತೆಯೂ ಎಸ್​ಐಟಿ ಮನವಿ ಮಾಡಿದೆ.

ಅಕ್ಟೋಬರ್​ 3ರಂದು ನಾಲ್ವರು ರೈತರು ಸೇರಿದಂತೆ 8 ಮಂದಿಯು ಉತ್ತರಪ್ರದೇಶದ ಲಖೀಂಪುರ ಖೇರಿಯಲ್ಲಿ ಬೆಂಗಾವಲು ವಾಹನದಡಿಗೆ ಸಿಲುಕಿ ಸಾವನ್ನಪ್ಪಿದ್ರು.

ಘಟನೆಯಲ್ಲಿ ಭಾಗಿಯಾಗಿರುವ ಕಾರುಗಳಲ್ಲಿ ಒಂದು ಆಶಿಶ್​ ಮಿಶ್ರಾರಿಗೆ ಸೇರಿದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು.

— Gargi Rawat (@GargiRawat) December 14, 2021

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...