alex Certify BREAKING NEWS: ಸಿಪಿಐ-ಎಂ ನಾಯಕ ಸೀತಾರಾಂ ಯೆಚೂರಿ ಪುತ್ರ ಕೊರೋನಾಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸಿಪಿಐ-ಎಂ ನಾಯಕ ಸೀತಾರಾಂ ಯೆಚೂರಿ ಪುತ್ರ ಕೊರೋನಾಗೆ ಬಲಿ

ನವದೆಹಲಿ: ಸಿಪಿಐ-ಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರ ಪುತ್ರ ಆಶಿಶ್ ಯೆಚೂರಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಕೊರೊನಾ ಸೋಂಕು ತಗುಲಿದ್ದ ಆಶಿಶ್ ಯೆಚೂರಿ ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ನಾನು ನನ್ನ ಹಿರಿಯ ಮಗ ಆಶಿಶ್ ಯೆಚೂರಿಯನ್ನು ಕೊರೊನಾದಿಂದ ಕಳೆದುಕೊಂಡೆ ಎಂದು ಹೇಳಲು ದುಃಖವಾಗುತ್ತಿದೆ. ಪುತ್ರನಿಗೆ ಚಿಕಿತ್ಸೆ ನೀಡಿದ ಎಲ್ಲರಿಗೂ ಧನ್ಯವಾದ ಹೇಳಲು ಬಯಸುತ್ತೇನೆ. ವೈದ್ಯರು, ದಾದಿಯರು, ಮುಂಚೂಣಿ ಆರೋಗ್ಯ ಕಾರ್ಯಕರ್ತರು, ನೈರ್ಮಲ್ಯ ಕಾರ್ಮಿಕರು ಹಾಗೂ ನಮ್ಮೊಂದಿಗೆ ಜೊತೆಯಾಗಿದ್ದ ಅಸಂಖ್ಯಾತ ಮಂದಿಗೆ ಧನ್ಯವಾದ ಹೇಳುವುದಾಗಿ ಸೀತಾರಾಮ್ ಯೆಚೂರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...