BREAKING: ವಿಜಯಪುರ ಜಿಲ್ಲೆಯಲ್ಲಿ ಘೋರ ದುರಂತ: ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 6 ಜನ ಜಲಸಮಾಧಿ…?

ವಿಜಯಪುರ: ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ ಆರು ಜನ ನೀರು ಪಾಲಾಗಿದ್ದಾರೆ. ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಬಳೂತಿ ಜಾಕ್ ವೆಲ್ ಸಮೀಪ ಘಟನೆ ನಡೆದಿದೆ.

ಕೃಷ್ಣಾ ನದಿಯ ದಡದಲ್ಲಿ ಇವರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ.  ಜೂಜಾಟದಲ್ಲಿ ತೊಡಗಿದ್ದವರು ಭಯದಿಂದ ತೆಪ್ಪದಲ್ಲಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಭಾರಿ ಗಾಳಿಯಿಂದ ತೆಪ್ಪ ಮಗುಚಿ ಆರು ಜನ ಜಲ ಸಮಾಧಿಯಾಗಿದ್ದಾರೆ. ಇಬ್ಬರು ಈಜಿಕೊಂಡು ದರ ಸೇರಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿದ್ದು, ಹುಡುಕಾಟ ನಡೆಸಿ ಇಬ್ಬರ ಮೃತದೇಹ ಹೊರಗೆ ತೆಗೆದಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read