alex Certify ಕೈ ತಪ್ಪಿದ ಕಾಂಗ್ರೆಸ್ ಟಿಕೆಟ್: ಪಕ್ಷೇತರ ಅಭ್ಯರ್ಥಿಯಾಗಿ ಸೌಭಾಗ್ಯ ಬಸವರಾಜನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೈ ತಪ್ಪಿದ ಕಾಂಗ್ರೆಸ್ ಟಿಕೆಟ್: ಪಕ್ಷೇತರ ಅಭ್ಯರ್ಥಿಯಾಗಿ ಸೌಭಾಗ್ಯ ಬಸವರಾಜನ್

ಚಿತ್ರದುರ್ಗ: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನು ಕಣಕ್ಕಿಳಿಸುವುದಾಗಿ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಘೋಷಣೆ ಮಾಡಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಟಿಕೆಟ್ ಹರಾಜಾಗಿದೆ. ಚುನಾವಣೆ ಮಾಡುವಷ್ಟೇ ಹಣವನ್ನು ಟಿಕೆಟ್ ಗೆ ನೀಡಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ನಾವೇನು ಹರಾಜು ಮತ್ತು ಎಷ್ಟು ಹಣ ಎಂಬುದನ್ನು ನೋಡಿಲ್ಲ ಎಂದು ಹೇಳಿದ್ದಾರೆ.

ರಘು ಆಚಾರ್ ಮನೆಗೆ ಬಂದು ಹಿರಿಯೂರು ಅಥವಾ ಹೊಸದುರ್ಗದಿಂದ ಸ್ಪರ್ಧಿಸುವಂತೆ ಸಲಹೆ ನೀಡಿದ್ದಾರೆ. ಆದರೆ, ಚಿತ್ರದುರ್ಗದಿಂದಲೇ ಪಕ್ಷೇತರ ಅಭ್ಯರ್ಥಿಯಾಗಿ ಸೌಭಾಗ್ಯ ಬಸವರಾಜನ್ ಸ್ಪರ್ಧೆಗೆ ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಮಾತನಾಡಿ, ನಾನು ಯಾವುದೇ ಚುನಾವಣೆಗಳಲ್ಲಿ ಸೋಲು ಕಂಡಿಲ್ಲ. ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಜಯಗಳಿಸಿದ್ದೇನೆ. ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ, ತಾಲೂಕು ಪಂಚಾಯಿತಿ ಅಧ್ಯಕ್ಷೆ, ಮೂರು ಬಾರಿ ಜಿಲ್ಲಾ ಪಂಚಾಯತಿ ಅಧ್ಯಕ್ಷೆರಾಗಿ ಕಾರ್ಯ ನಿರ್ವಹಿಸಿದ್ದೇನೆ. ಶೇಕಡ 50ರಷ್ಟು ಮಹಿಳಾ ಮತದಾರರಿದ್ದು, ಮಹಿಳಾ ಪ್ರತಿನಿಧಿಯಾಗಿ ನಾನು ಸ್ಪರ್ಧಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...