alex Certify ಬೇಷರತ್ ಕ್ಷಮೆ ಕೇಳಲು ಕಾಂಗ್ರೆಸ್ ನಾಯಕರಿಗೆ ನೋಟಿಸ್ ನೀಡಿದ ಸ್ಮೃತಿ ಇರಾನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೇಷರತ್ ಕ್ಷಮೆ ಕೇಳಲು ಕಾಂಗ್ರೆಸ್ ನಾಯಕರಿಗೆ ನೋಟಿಸ್ ನೀಡಿದ ಸ್ಮೃತಿ ಇರಾನಿ

ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಪುತ್ರಿ ಆಕ್ರಮವಾಗಿ ಬಾರ್ ಹೊಂದಿರುವ ಆರೋಪ ಮಾಡಿದ ಕಾಂಗ್ರೆಸ್ ನಾಯಕರಿಗೆ ಲೀಗಲ್ ನೋಟಿಸ್ ನೀಡಲಾಗಿದೆ.

ಸ್ಮೃತಿ ಇರಾನಿ ಅವರು ಕಾಂಗ್ರೆಸ್ ನಾಯಕರದ ಪವನ್ ಖೇರಾ, ಜೈರಾಮ್ ರಮೇಶ್ ಮತ್ತು ನೆಟ್ಟ ಡಿಸೋಜಾ ಅವರಿಗೆ ನೋಟಿಸ್ ನೀಡಿದ್ದಾರೆ. ಬೇಷರತ್ ಕ್ಷಮೆ ಕೋರದಿದ್ದರೆ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುವುದು ಎಂದು ನೋಟಿಸ್ ನಲ್ಲಿ ಅವರು ಎಚ್ಚರಿಕೆ ನೀಡಿದ್ದಾರೆ.

ಸ್ಮೃತಿ ಇರಾನಿ ಪುತ್ರಿ ಗೋವಾದಲ್ಲಿ ಅಕ್ರಮವಾಗಿ ಬಾರ್ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದರು. ಕಾಂಗ್ರೆಸ್ ತನ್ನ ಮಗಳ ಚಾರಿತ್ರ್ಯ ವಧೆ ಮಾಡಿದೆ ಎಂದು ಆರೋಪಿಸಿರುವ ಸ್ಮೃತಿ ಇರಾನಿ ನ್ಯಾಯಾಲಯದಲ್ಲಿ ಉತ್ತರ ಹುಡುಕುತ್ತೇನೆ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...